ಜಾರಿಯಾಗದ ಪ್ಲಾಸ್ಟಿಕ್ ನಿಷೇಧ
ಗಿರಿಭಾಗದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಂಡೊಯ್ಯುವುದನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ಆದರೆ ಜಾರಿ ಮಾತ್ರ ಇನ್ನೂ ಸಮಪರ್ಕವಾಗಿ ಆಗಿಲ್ಲ. ಪ್ಲಾಸ್ಟಿಕ್ ಬಾಟಲಿ ಸಾಗಣೆ ನಿಷೇಧ ಮಾಡಬೇಕೆಂದರೆ ಅದಕ್ಕೆ ಪೂರಕವಾಗಿ ಗಿರಿಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಿದೆ. ಸದ್ಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಬಳಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನೀರಿನ ಸೌಕರ್ಯ ಕಲ್ಪಿಸದೆ ಪ್ಲಾಸ್ಟಿಕ್ ಬಾಟಲಿ ನಿಷೇಧ ಮಾಡಲು ಆಗುವುದಿಲ್ಲ. ಆದ್ದರಿಂದ ಅಲ್ಲಲ್ಲಿ ಈ ಘಟಕ ತೆರೆಯಲಾಗುತ್ತಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ಮಾಹಿತಿ ನೀಡಿದರು.