<p><strong>ಚಿಕ್ಕಮಗಳೂರು: </strong>ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಮಳೆಯಾಗಿದೆ. ಗಿರಿಶ್ರೇಣಿಯ ಕವಿಕಲ್ಗಂಡಿ ಸನಿಹದಲ್ಲಿ ರಸ್ತೆಯ ಬದಿಯ ರಕ್ಷಣಾ ಗೋಡೆ ಕುಸಿದಿದೆ.</p>.<p>ಸಂಜೆ ಮತ್ತು ರಾತ್ರಿ ಮಳೆ ಸುರಿಯಿತು. ಗುಡುಗು ಮಿಂಚಿನ ಆರ್ಭಟ ಇತ್ತು. ನಗರದ ರಾಮನಹಳ್ಳಿ, ಹನುಮಂತನಗರದಲ್ಲಿ ಮೋರಿ ನೀರು ರಸ್ತೆಯಲ್ಲಿ ಹರಿದಿದೆ.</p>.<p>ನಗರದ ವಿವಿಧೆಡೆ ಕಾಮಗಾರಿ ರಸ್ತೆ ಅಗೆದು ತಗ್ಗು, ಗುಂಡಿಯಾಗಿರುವ ಜಾಗಗಳಲ್ಲಿ ನೀರು ಆವರಿಸಿದೆ. ಮಣ್ಣಿನ ರಸ್ತೆಗಳು ರಾಡಿಯಾಗಿದೆ. ಓಡಾಟ ಪಡಿಪಾಟಲಾಗಿದೆ.</p>.<p>ಅಲ್ಲಂಪುರ, ಕೈಮರ, ಅತ್ತಿಗುಂಡಿ, ಗಿರಿಶ್ರೇಣಿ ಸಹಿತ ವಿವಿಧೆಡೆಗಳಲ್ಲಿ ಮಳೆಯಾಗಿದೆ. ಝರಿ, ಹಳ್ಳಗಳಲ್ಲಿ ಹರಿವು ತುಸು ಹೆಚ್ಚಾಗಿದೆ.</p>.<p>ಬಿಳ್ಳೂರು– 5.8, ಕೊಟ್ಟಿಗೆಹಾರ– 5.6, ವಸ್ತಾರೆ– 4.9 , ಅತ್ತಿಗುಂಡಿ– 4.8, ಮೂಡಿಗೆರೆ– 4, ಬಸ್ರೀಕಟ್ಟೆ– 2.7, ಚಿಕ್ಕಮಗಳೂರು– 2.2, ಬಾಳೆಹೊನ್ನೂರು 2 ಸೆಂ.ಮೀ ಮಳೆಯಾಗಿದೆ.</p>.<p class="Briefhead"><strong>ಬಿರುಸಿನ ಮಳೆ</strong></p>.<p><strong>ಕೊಪ್ಪ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಬಿರುಸು ಮಳೆಯಾಗಿದೆ.</p>.<p>ಬೆಳಿಗ್ಗೆಯಿಂದ ಬಿಸಿಲಿನ ವಾತಾವಣ ಇತ್ತು. ಮಧ್ಯಾಹ್ನ 2.30ರ ಹೊತ್ತಿಗೆ ಗುಡುಗು ಪ್ರಾರಂಭವಾಯಿತು, ಅರ್ಧ ತಾಸು ಜೋರಾಗಿ ಮಳೆ ಸುರಿಯಿತು. ಈ ವೇಳೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.</p>.<p>ಗುರುವಾರ ರಾತ್ರಿ ಹೊತ್ತಿನಲ್ಲಿ ಮಳೆ ಸುರಿದಿತ್ತು. ಪಟ್ಟಣ ಪ್ರದೇಶದಲ್ಲಿ 24 ತಾಸುಗಳಲ್ಲಿ 1.02 ಸೆಂ.ಮೀ. ಮಳೆ ದಾಖಲಾಗಿದೆ. ಅಕಾಲಿಕ ಮಳೆಯಿಂದ ಅಡಿಕೆ ಕೃಷಿಗೆ ಅಡಚಣೆಯಾಗಿದೆ.</p>.<p class="Subhead">ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಹಾರ್ಗೋಡು ಗ್ರಾಮದಲ್ಲಿ ಶಶಿ ಮತ್ತು ರತ್ನಾ ವಾಸವಿದ್ದ ಮನೆಗೆ ಗುರುವಾರ ಸಂಜೆ ಸಿಡಿಲು ಬಡಿದು ವಿದ್ಯುತ್ ಸಾಧನಗಳು ಹಾಗೂ ಉಪಕರಣಗಳು ಸುಟ್ಟು ಕರಕಲಾಗಿವೆ. ಸಿಡಿಲಿನ ಹೊಡೆತಕ್ಕೆ ಎಲ್ಲಾ ವೈಯರ್ ಸುಟ್ಟು ಬೆಂಕಿ ಹೊತ್ತಿಕೊಂಡು ಅಪಾರ ನಷ್ಟ ಸಂಭವಿಸಿದೆ.</p>.<p>ಸ್ಥಳಕ್ಕೆ ಫಲ್ಗುಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾ ಹರೀಶ್, ಸದಸ್ಯರಾದ ಲೋಹಿತ್, ಸತೀಶ್, ರಮ್ಯಾ, ಕೋಮಲ, ಗ್ರಾಮ ಲೆಕ್ಕಾಧಿಕಾರಿ ನಮಿತಾ ಭೇಟಿ ನೀಡಿದರು.</p>.<p class="Briefhead"><strong>ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ</strong></p>.<p><strong>ಬೆಂಗಳೂರು: </strong>ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ರಾಜ್ಯದಲ್ಲಿ ಮುಂಗಾರು ಮಾರುತ ಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.</p>.<p>ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.</p>.<p>ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಮಳೆಯಾಗಿದೆ. ಗಿರಿಶ್ರೇಣಿಯ ಕವಿಕಲ್ಗಂಡಿ ಸನಿಹದಲ್ಲಿ ರಸ್ತೆಯ ಬದಿಯ ರಕ್ಷಣಾ ಗೋಡೆ ಕುಸಿದಿದೆ.</p>.<p>ಸಂಜೆ ಮತ್ತು ರಾತ್ರಿ ಮಳೆ ಸುರಿಯಿತು. ಗುಡುಗು ಮಿಂಚಿನ ಆರ್ಭಟ ಇತ್ತು. ನಗರದ ರಾಮನಹಳ್ಳಿ, ಹನುಮಂತನಗರದಲ್ಲಿ ಮೋರಿ ನೀರು ರಸ್ತೆಯಲ್ಲಿ ಹರಿದಿದೆ.</p>.<p>ನಗರದ ವಿವಿಧೆಡೆ ಕಾಮಗಾರಿ ರಸ್ತೆ ಅಗೆದು ತಗ್ಗು, ಗುಂಡಿಯಾಗಿರುವ ಜಾಗಗಳಲ್ಲಿ ನೀರು ಆವರಿಸಿದೆ. ಮಣ್ಣಿನ ರಸ್ತೆಗಳು ರಾಡಿಯಾಗಿದೆ. ಓಡಾಟ ಪಡಿಪಾಟಲಾಗಿದೆ.</p>.<p>ಅಲ್ಲಂಪುರ, ಕೈಮರ, ಅತ್ತಿಗುಂಡಿ, ಗಿರಿಶ್ರೇಣಿ ಸಹಿತ ವಿವಿಧೆಡೆಗಳಲ್ಲಿ ಮಳೆಯಾಗಿದೆ. ಝರಿ, ಹಳ್ಳಗಳಲ್ಲಿ ಹರಿವು ತುಸು ಹೆಚ್ಚಾಗಿದೆ.</p>.<p>ಬಿಳ್ಳೂರು– 5.8, ಕೊಟ್ಟಿಗೆಹಾರ– 5.6, ವಸ್ತಾರೆ– 4.9 , ಅತ್ತಿಗುಂಡಿ– 4.8, ಮೂಡಿಗೆರೆ– 4, ಬಸ್ರೀಕಟ್ಟೆ– 2.7, ಚಿಕ್ಕಮಗಳೂರು– 2.2, ಬಾಳೆಹೊನ್ನೂರು 2 ಸೆಂ.ಮೀ ಮಳೆಯಾಗಿದೆ.</p>.<p class="Briefhead"><strong>ಬಿರುಸಿನ ಮಳೆ</strong></p>.<p><strong>ಕೊಪ್ಪ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಬಿರುಸು ಮಳೆಯಾಗಿದೆ.</p>.<p>ಬೆಳಿಗ್ಗೆಯಿಂದ ಬಿಸಿಲಿನ ವಾತಾವಣ ಇತ್ತು. ಮಧ್ಯಾಹ್ನ 2.30ರ ಹೊತ್ತಿಗೆ ಗುಡುಗು ಪ್ರಾರಂಭವಾಯಿತು, ಅರ್ಧ ತಾಸು ಜೋರಾಗಿ ಮಳೆ ಸುರಿಯಿತು. ಈ ವೇಳೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.</p>.<p>ಗುರುವಾರ ರಾತ್ರಿ ಹೊತ್ತಿನಲ್ಲಿ ಮಳೆ ಸುರಿದಿತ್ತು. ಪಟ್ಟಣ ಪ್ರದೇಶದಲ್ಲಿ 24 ತಾಸುಗಳಲ್ಲಿ 1.02 ಸೆಂ.ಮೀ. ಮಳೆ ದಾಖಲಾಗಿದೆ. ಅಕಾಲಿಕ ಮಳೆಯಿಂದ ಅಡಿಕೆ ಕೃಷಿಗೆ ಅಡಚಣೆಯಾಗಿದೆ.</p>.<p class="Subhead">ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಹಾರ್ಗೋಡು ಗ್ರಾಮದಲ್ಲಿ ಶಶಿ ಮತ್ತು ರತ್ನಾ ವಾಸವಿದ್ದ ಮನೆಗೆ ಗುರುವಾರ ಸಂಜೆ ಸಿಡಿಲು ಬಡಿದು ವಿದ್ಯುತ್ ಸಾಧನಗಳು ಹಾಗೂ ಉಪಕರಣಗಳು ಸುಟ್ಟು ಕರಕಲಾಗಿವೆ. ಸಿಡಿಲಿನ ಹೊಡೆತಕ್ಕೆ ಎಲ್ಲಾ ವೈಯರ್ ಸುಟ್ಟು ಬೆಂಕಿ ಹೊತ್ತಿಕೊಂಡು ಅಪಾರ ನಷ್ಟ ಸಂಭವಿಸಿದೆ.</p>.<p>ಸ್ಥಳಕ್ಕೆ ಫಲ್ಗುಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾ ಹರೀಶ್, ಸದಸ್ಯರಾದ ಲೋಹಿತ್, ಸತೀಶ್, ರಮ್ಯಾ, ಕೋಮಲ, ಗ್ರಾಮ ಲೆಕ್ಕಾಧಿಕಾರಿ ನಮಿತಾ ಭೇಟಿ ನೀಡಿದರು.</p>.<p class="Briefhead"><strong>ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ</strong></p>.<p><strong>ಬೆಂಗಳೂರು: </strong>ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ರಾಜ್ಯದಲ್ಲಿ ಮುಂಗಾರು ಮಾರುತ ಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.</p>.<p>ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.</p>.<p>ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>