ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ– ಗಾಳಿ ಮುಂದುವರಿದಿದೆ. ಮೂಡಿಗೆರೆ, ಕಳಸ, ಎನ್.ಆರ್.ಪುರ, ಶೃಂಗೇರಿ ಭಾಗದಲ್ಲಿ ವೃಕ್ಷಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕೆಲವೆಡೆ ಸಂಚಾರಕ್ಕೆ ಅಡಚಣೆಯಾಗಿದೆ. ಬಾಳೆಹೊನ್ನೂರು ಬಳಿಯ ಅಂಡವಾನೆ ಗ್ರಾಮದ ಶಂಕರ್ (26) ಎಂಬಾತ ಗುರುವಾರ ಬೆಳಿಗ್ಗೆ ಗದ್ದೆ ಬದಿಯಲ್ಲಿ ಸಾಗುವಾಗ ಕಾಲುಜಾರಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ಧಾರೆ.