ಮಳೆಯಿಂದ ಅಡಿಕೆ, ತೆಂಗು, ಭತ್ತದ ಬೆಳೆಗಳಿಗೆ ಅನುಕೂಲವಾಗಿದೆ. ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ಸೋಮವಾರ ಸಂಜೆ ಸುರಿದ ಮಳೆ–ಗಾಳಿಗೆ ಅಡಿಕೆ, ತೆಂಗು, ಬಾಳೆ ಬೆಳೆಗಳು ನೆಲಕ್ಕೆ ಉರುಳಿವೆ. ಗುಡುಗು ಸಿಡಿಲಿಂದ ಆರಂಭವಾದ ಮಳೆಯ ಜೊತೆಗೆ ಜೋರಾದ ಗಾಳಿ ಬೀಸಿದ್ದರಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ. ಗ್ರಾಮದ ಮೋಹನ್ ಕುಮಾರ ಅವರ ತೋಟದಲ್ಲಿ ನೂರಾರು ಅಡಿಕೆ ಮರಗಳು ನೆಲಕ್ಕೆ ಉರುಳಿವೆ.