ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರೀ ಮಳೆ ಹಿನ್ನೆಲೆ: ಕಳಸ– ಕುದುರೆಮುಖ ರಸ್ತೆ ಸಂಚಾರ ಬಂದ್‌

Last Updated 8 ಆಗಸ್ಟ್ 2022, 11:22 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಕಳಸ ತಾಲ್ಲೂಕಿನ ಜಾಂಬಳೆ ಪ್ರದೇಶದಲ್ಲಿ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಕಳಸ– ಕುದುರೆಮುಖ ಮಾರ್ಗದಲ್ಲಿ ಸಂಚಾರಕ್ಕೆ ಬಂದ್‌ ಆಗಿದೆ.

ಕಳಸ, ಸಂಸೆ, ನೆಲ್ಲಿಬೀಡು ಭಾಗದಲ್ಲಿ ತೋಟ, ಜಮೀನುಗಳಿಗೆ ನೀರು ನುಗ್ಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್‌ನ ಆರೋಗ್ಯ ಸಿಬ್ಬಂದಿ ವಸತಿ ಗೃಹ ಮತ್ತು ಉರ್ದು ಪ್ರಾಥಮಿಕ ಶಾಲೆಯ ಶೌಚಾಲಯದ ಮೇಲೆ ವೃಕ್ಷ ಉರುಳಿದೆ. ಹಾನಗಸಿ ಪ್ರದೇಶದಲ್ಲಿ ಧರೆ ಕುಸಿದಿದೆ. ಚಿನ್ನಿಗ ಗ್ರಾಮದಲ್ಲಿ ಮನೆಯೊಂದು ಹಾನಿಯೊಂದು ಹಾನಿಯಾಗಿದ್ದು, ಕುಟುಂಬಕ್ಕೆ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನಲ್ಲಿ 15 ಮನೆಗಳು ಹಾನಿಯಾಗಿವೆ. ಕೆರೆಕಟ್ಟೆ– 16.3, ಹೊಸಕೆರೆ– 14.3, ಕೊಟ್ಟಿಗೆಹಾರ –12.3, ಹಿರೇಬೈಲು– 11,ಕಮ್ಮರಡಿ– 10.5 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT