ಗಾಂಧಿಮೈದಾನ ಅಂಗಡಿ ಹಾಗೂ ಜನರನ್ನು ಸ್ಥಳಾಂತರಿಸಲಾಗಿದೆ. ತಾಲ್ಲೂಕಿನಲ್ಲಿ ಬೇಗಾರಿನ ಆಂಪೆಯಲ್ಲಿ 1 ಕಂಬ, ಗೋಳುಗೋಡುನಲ್ಲಿ 1 ವಿದ್ಯುತ್ ಕಂಬ ಧರೆಗೆ ಉರುಳಿದೆ.
ತಾಲ್ಲೂಕಿನ ಕೆರೆ ಗ್ರಾಮ ಪಂಚಾಯಿತಿ ಶಿರ್ಲು, ಹಾದಿ, ಕೆರೆ, ಸುಂಕದಮಕ್ಕಿ, ನಿಲಂದೂರು, ಕುಂಬ್ರಗೋಡು, ಕೂಗೋಡು ಗ್ರಾಮಗಳು ಪಟ್ಟಣ
ದಿಂದ 25 ರಿಂದ 30 ಕಿ.ಮೀ. ದೂರವಿದ್ದು ಅಸ್ಪತ್ರೆಗೆ ಬರಲು ಜನರು ಹರಸಾಹಸ ಪಡಬೇಕಿದೆ. ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದ್ದು ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪರ ವಹಿವಾಟು ಕಡಿಮೆ ಆಗಿದೆ.
ತಹಶೀಲ್ದಾರ್ ಗೌರಮ್ಮ, ಪೊಲೀಸ್ ಇನ್ಸ್ಪೆಕ್ಟರ್ ರವಿ ಬಿ.ಎಸ್, ಅಗ್ನಿ ಶಾಮಕ ಸಿಬ್ಬಂದಿ ಕ್ರಮ ವಹಿಸಿದ್ದಾರೆ.