ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ರಾ. ಹೆ. 169ರಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧ

Last Updated 22 ಜುಲೈ 2021, 16:09 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169 (ತೀರ್ಥಹಳ್ಳಿ– ಶೃಂಗೇರಿ– ಮಂಗಳೂರು ಮಾರ್ಗ)ರ ಕೆಲವೆಡೆ ಕಿರು ಸೇತುವೆಗಳು ಶಿಥಿಲವಾಗಿರುವುದರಿಂದ ಈ ಮಾರ್ಗದ ತನಿಕೋಡಿನಿಂದ ಎಸ್‌.ಕೆ.ಬಾರ್ಡರ್‌ವರೆಗೆ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಅ.15ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಚಿಕ್ಕಮಗಳೂರು ಕಡೆಯಿಂದ ಸಂಚರಿಸುವ ಭಾರಿ ವಾಹನಗಳು ಬಾಳೆಹೊನ್ನೂರು – ಮಾಗುಂಡಿ – ಕಳಸ– ಕುದುರೆಮುಖ ಮಾರ್ಗವಾಗಿ ಎಸ್‌.ಕೆ.ಬಾರ್ಡರ್‌ ಹಾಗೂ ನರಸಿಂಹರಾಜಪುರ ಕಡೆಯಿಂದ ಸಂಚರಿಸುವ ಭಾರಿ ವಾಹನಗಳು ಕೊಪ್ಪ – ಜಯಪುರ – ಬಾಳೆಹೊಳೆ – ಕಳಸ – ಕುದುರೆಮುಖ ಮಾರ್ಗವಾಗಿ ಎಸ್‌.ಕೆ.ಬಾರ್ಡರ್‌ ತಲುಪಬಹುದು ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT