ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ‘ಬಾಬಾ ಬುಡನ್ಗಿರಿ ಗುರು ದತ್ತಾತ್ರೇಯ ಪೀಠ’ ದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸುವ ತಕರಾರನ್ನು ಬಗೆಹರಿಸಿ, ಕೋಮು ಸೌಹಾರ್ದ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಹಿಂದೂ ಹಾಗೂ ಮುಸ್ಲಿಮರ ಪೂಜೆ ನೆರವೇರಿಲು ಪ್ರತ್ಯೇಕ ವ್ಯವಸ್ಥೆ ಮಾಡುವ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ.