<p><strong>ಚಿಕ್ಕಮಗಳೂರು:</strong> ‘ಎಲ್ಲರಿಗೂ ಅವರ ಅಪೇಕ್ಷೆಯಂತೆ ಖಾತೆ ಹಂಚುವುದು ಕಷ್ಟ ಸಾಧ್ಯ. ಖಾತೆ ವಿಚಾರದಲ್ಲಿ ಅಸಮಾಧಾನಗೊಂಡಿರುವವರನ್ನು ಮುಖ್ಯಮಂತ್ರಿಯವರು ಖಂಡಿತ ಸಮಾಧಾನ ಮಾಡುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ತಂಡವು ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯೊಬ್ಬನ್ನು ಬಂಧಿಸಿದೆ. ನಾಡಿನಲ್ಲಿ ವಿಚ್ಛಿದ್ರಕಾರಕ ಶಕ್ತಿ ತಲೆ ಎತ್ತಲು ಬಿಡುವುದಿಲ್ಲ. ಪೊಲೀಸರನ್ನೂ ಅಲರ್ಟ್ ಮಾಡುತ್ತೇವೆ’ ಎಂದು ಉತ್ತರಿಸಿದರು.</p>.<p>‘ಬಾಂಗ್ಲಾದಿಂದ ಬಂದು ಇಲ್ಲಿ ನೆಲೆಸಿದ್ದರೆ ಅಂಥವರ ಪರಿಶೀಲನೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಅಸ್ಸಾಂನಲ್ಲಿ ದಾಖಲೆ ಸೃಷ್ಟಿಸಿಕೊಂಡು ಬಂದಿದ್ದಾರೆ ಎಂಬ ಮಾಹಿತಿ ಇದೆ, ಆ ದಾಖಲೆಗಳ ಅಸಲಿಯತ್ತು ಪರಿಶೀಲಿಸುವಂತೆ ತಿಳಿಸಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಎಲ್ಲರಿಗೂ ಅವರ ಅಪೇಕ್ಷೆಯಂತೆ ಖಾತೆ ಹಂಚುವುದು ಕಷ್ಟ ಸಾಧ್ಯ. ಖಾತೆ ವಿಚಾರದಲ್ಲಿ ಅಸಮಾಧಾನಗೊಂಡಿರುವವರನ್ನು ಮುಖ್ಯಮಂತ್ರಿಯವರು ಖಂಡಿತ ಸಮಾಧಾನ ಮಾಡುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ತಂಡವು ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯೊಬ್ಬನ್ನು ಬಂಧಿಸಿದೆ. ನಾಡಿನಲ್ಲಿ ವಿಚ್ಛಿದ್ರಕಾರಕ ಶಕ್ತಿ ತಲೆ ಎತ್ತಲು ಬಿಡುವುದಿಲ್ಲ. ಪೊಲೀಸರನ್ನೂ ಅಲರ್ಟ್ ಮಾಡುತ್ತೇವೆ’ ಎಂದು ಉತ್ತರಿಸಿದರು.</p>.<p>‘ಬಾಂಗ್ಲಾದಿಂದ ಬಂದು ಇಲ್ಲಿ ನೆಲೆಸಿದ್ದರೆ ಅಂಥವರ ಪರಿಶೀಲನೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಅಸ್ಸಾಂನಲ್ಲಿ ದಾಖಲೆ ಸೃಷ್ಟಿಸಿಕೊಂಡು ಬಂದಿದ್ದಾರೆ ಎಂಬ ಮಾಹಿತಿ ಇದೆ, ಆ ದಾಖಲೆಗಳ ಅಸಲಿಯತ್ತು ಪರಿಶೀಲಿಸುವಂತೆ ತಿಳಿಸಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>