<p><strong>ಬಾಳೆಹೊನ್ನೂರು</strong>: ಇಲ್ಲಿಗೆ ಸಮೀಪದ ಹಲಸೂರು ಗ್ರಾಮದ ಗುಬ್ಬುಗೊಡಿಗೆಯಲ್ಲಿ ಮಮತಾ (31) ಮೃತಪಟ್ಟಿದ್ದು ವರದಕ್ಷಿಣೆ ಕಿರುಕುಳ ಆರೋಪದ ಅಡಿ ಪತಿ ಅವಿನಾಶ್ನನ್ನು ಬಂಧಿಸಲಾಗಿದೆ. ಮಾವ ನಾರಾಯಣಗೌಡ, ಅತ್ತೆ ಅನಸೂಯ ಹಾಗೂ ನಾದಿನಿ ಅಮಿತ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಮತಾ ಅವರನ್ನು 2020ರ ಮೇ 27ರಂದು ಅವಿನಾಶ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯ ಸಮಯಲ್ಲಿ 110 ಗ್ರಾಂ ಚಿನ್ನಾಭರಣ ನೀಡಿದ್ದರೂ ಪತಿ, ಅತ್ತೆ ಮತ್ತು ಮಾವ ವರದಕ್ಷಿಣೆ ತರುವಂತೆ ಒತ್ತಾಯಿಸಿದ್ದರು ಎಂದು ದೂರಲಾಗಿದೆ. ಅವಿನಾಶ್ಗೆ ₹ 50 ಸಾವಿರ ಮೊತ್ತವನ್ನು ಗೂಗಲ್ ಪೇ ಮೂಲಕ ನೀಡಿದ್ದರೂ ಹಿಂಸೆ ನೀಡುವುದು ನಿಂತಿರಲಿಲ್ಲ ಎನ್ನಲಾಗಿದೆ.</p>.<p>ಜ.26ರಂದು ಮಮತಾಗೆ ಫಿಟ್ಸ್ ಬಂದಿದೆ ಎಂದು ಅವಿನಾಶ್ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಮತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವಿಷಯ ಆ ನಂತರ ತಿಳಿದು ಬಂದಿದ್ದು ಸಾವಿನ ಬಗ್ಗೆ ಅನುಮಾನವಿದೆ ಎಂದು ಸಹೋದರ ಬನ್ನೂರು ಗ್ರಾಮದ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ಇಲ್ಲಿಗೆ ಸಮೀಪದ ಹಲಸೂರು ಗ್ರಾಮದ ಗುಬ್ಬುಗೊಡಿಗೆಯಲ್ಲಿ ಮಮತಾ (31) ಮೃತಪಟ್ಟಿದ್ದು ವರದಕ್ಷಿಣೆ ಕಿರುಕುಳ ಆರೋಪದ ಅಡಿ ಪತಿ ಅವಿನಾಶ್ನನ್ನು ಬಂಧಿಸಲಾಗಿದೆ. ಮಾವ ನಾರಾಯಣಗೌಡ, ಅತ್ತೆ ಅನಸೂಯ ಹಾಗೂ ನಾದಿನಿ ಅಮಿತ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಮತಾ ಅವರನ್ನು 2020ರ ಮೇ 27ರಂದು ಅವಿನಾಶ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯ ಸಮಯಲ್ಲಿ 110 ಗ್ರಾಂ ಚಿನ್ನಾಭರಣ ನೀಡಿದ್ದರೂ ಪತಿ, ಅತ್ತೆ ಮತ್ತು ಮಾವ ವರದಕ್ಷಿಣೆ ತರುವಂತೆ ಒತ್ತಾಯಿಸಿದ್ದರು ಎಂದು ದೂರಲಾಗಿದೆ. ಅವಿನಾಶ್ಗೆ ₹ 50 ಸಾವಿರ ಮೊತ್ತವನ್ನು ಗೂಗಲ್ ಪೇ ಮೂಲಕ ನೀಡಿದ್ದರೂ ಹಿಂಸೆ ನೀಡುವುದು ನಿಂತಿರಲಿಲ್ಲ ಎನ್ನಲಾಗಿದೆ.</p>.<p>ಜ.26ರಂದು ಮಮತಾಗೆ ಫಿಟ್ಸ್ ಬಂದಿದೆ ಎಂದು ಅವಿನಾಶ್ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಮತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವಿಷಯ ಆ ನಂತರ ತಿಳಿದು ಬಂದಿದ್ದು ಸಾವಿನ ಬಗ್ಗೆ ಅನುಮಾನವಿದೆ ಎಂದು ಸಹೋದರ ಬನ್ನೂರು ಗ್ರಾಮದ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>