<p><strong>ಚಿಕ್ಕಮಗಳೂರು</strong>: ‘ದೇಶದ ಪ್ರಜೆಗಳು ಬದಲಾಗಬೇಕು, ಆಗ ಈ ದೇಶದ ವ್ಯವಸ್ಥೆ ಬದಲಾಗಲು ಸಾಧ್ಯ’ ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.</p>.<p>ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಐಸಿರಿ ಫೌಂಡೇಷನ್ ಹಾಗೂ ಐಡಿಎಸ್ಜಿ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ವೀ ದ ಪೀಪಲ್ ಆಫ್ ಇಂಡಿಯಾ’ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನದ ದೃಷ್ಟಿಕೋನಗಳು ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಾರತದ ಪ್ರಜೆಗಳಾದ ನಾವು ಸಂವಿಧಾನದ ಪೀಠಿಕೆ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಅಂಬೇಡ್ಕರ್ ಅಶಯಗಳಾದ ಶಿಕ್ಷಣ, ಸಂಘಟನೆ, ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.</p>.<p>‘ಮತದಾನದ ಮಹತ್ವ ತಿಳಿಯದೆ ಕೆಲವರು ಮತವನ್ನು ಹಣದ ಆಸೆಗೆ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಮತವನ್ನು ಪ್ರಮಾಣಿಕವಾಗಿ ಚಲಾಯಿಸುವುದು ನಮ್ಮ ಕೈಯಲ್ಲಿದೆ’ ಎಂದರು. </p>.<p>ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಮಹಿಳೆಯರಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಕ್ಕು ದೊರಕಿಸಿಕೊಟ್ಟುವರು ಅಂಬೇಡ್ಕರ್’ ಎಂದರು. ವಕೀಲ ಸತ್ಯನಾರಾಯಣ ಉಪನ್ಯಾಸ ನೀಡಿದರು. ಪ್ರಾಂಶುಪಾಲೆ ಪುಷ್ಪಭಾರತಿ ಅಧ್ಯಕ್ಷತೆ ವಹಿಸಿದ್ದರು, ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾಗರ್ವಪುರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ದೇಶದ ಪ್ರಜೆಗಳು ಬದಲಾಗಬೇಕು, ಆಗ ಈ ದೇಶದ ವ್ಯವಸ್ಥೆ ಬದಲಾಗಲು ಸಾಧ್ಯ’ ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.</p>.<p>ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಐಸಿರಿ ಫೌಂಡೇಷನ್ ಹಾಗೂ ಐಡಿಎಸ್ಜಿ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ವೀ ದ ಪೀಪಲ್ ಆಫ್ ಇಂಡಿಯಾ’ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನದ ದೃಷ್ಟಿಕೋನಗಳು ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಾರತದ ಪ್ರಜೆಗಳಾದ ನಾವು ಸಂವಿಧಾನದ ಪೀಠಿಕೆ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಅಂಬೇಡ್ಕರ್ ಅಶಯಗಳಾದ ಶಿಕ್ಷಣ, ಸಂಘಟನೆ, ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.</p>.<p>‘ಮತದಾನದ ಮಹತ್ವ ತಿಳಿಯದೆ ಕೆಲವರು ಮತವನ್ನು ಹಣದ ಆಸೆಗೆ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಮತವನ್ನು ಪ್ರಮಾಣಿಕವಾಗಿ ಚಲಾಯಿಸುವುದು ನಮ್ಮ ಕೈಯಲ್ಲಿದೆ’ ಎಂದರು. </p>.<p>ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಮಹಿಳೆಯರಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಕ್ಕು ದೊರಕಿಸಿಕೊಟ್ಟುವರು ಅಂಬೇಡ್ಕರ್’ ಎಂದರು. ವಕೀಲ ಸತ್ಯನಾರಾಯಣ ಉಪನ್ಯಾಸ ನೀಡಿದರು. ಪ್ರಾಂಶುಪಾಲೆ ಪುಷ್ಪಭಾರತಿ ಅಧ್ಯಕ್ಷತೆ ವಹಿಸಿದ್ದರು, ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾಗರ್ವಪುರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>