<p><strong>ಚಿಕ್ಕಮಗಳೂರು</strong>: ಸಾಲದ ಕಂತು ಪಾವತಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡದೆ ಜೆಸಿಬಿ ವಶಕ್ಕೆ ಪಡೆದು ಹರಾಜು ಮಾಡಲಾಗಿದೆ. ಇದರಿಂದ ರೈತನಿಗೆ ಅನ್ಯಾಯವಾಗಿದೆ ಎಂದು ರೈತ ಸಂಘದ ಮುಖಂಡ ಗುರುಶಾಂತಪ್ಪ ಹೇಳಿದರು.</p>.<p>ತಾಲ್ಲೂಕಿನ ಗೌಡನಹಳ್ಳಿ ವಾಸಿ ಮಂಜುನಾಥ್ ಅವರು ಜೆಸಿಬಿ ಕೊಳ್ಳುವ ಉದ್ದೇಶದಿಂದ ನಗರದ ಎಂ.ಜಿ. ರಸ್ತೆಯಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ನಿಂದ 2023ರ ಡಿ. 12ರಂದು ₹29 ಲಕ್ಷ ಸಾಲ ಪಡೆದಿದ್ದರು. ಒಟ್ಟು ₹36 ಲಕ್ಷ ಬಂಡವಾಳ ಹೂಡಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಾಲದ ಕಂತು 58 ತಿಂಗಳು ಇದ್ದು, ಪ್ರತಿ ತಿಂಗಳು ₹65,065 ಪಾವತಿಸಲು ಒಪ್ಪಿಸಿದ್ದರು. ಅದರಂತೆ ಸಾಲದ ಕಂತು ₹17.50 ಲಕ್ಷ ಪಾವತಿಸಿದ್ದಾರೆ. ಆದರೆ, ಸಮಯಕ್ಕೆ ಸರಿಯಾಗಿ ಕಂತು ತೀರಿಸಲು ಸಾಧ್ಯವಾಗಿಲ್ಲ ಎಂಬ ನೆಪದಲ್ಲಿ ಜೆಸಿಬಿಯನ್ನು 6 ತಿಂಗಳ ಹಿಂದೆಯೇ ಜಪ್ತಿ ಮಾಡಿದ್ದರು.</p>.<p>ಬ್ಯಾಂಕಿಗೆ ಹೋಗಿ ವಿಚಾರಿಸಿದರೆ ₹50 ಲಕ್ಷ ಪಾವತಿಸಿರೆ ಜೆಸಿಬಿ ವಾಪಸ್ಸು ಕೊಡುವುದಾಗಿ ತಿಳಿಸಿದ್ದಾರೆ. ಖಾಸಗಿ ಸಾಲ ಪಡೆದು ₹50 ಲಕ್ಷ ಹೊಂದಿಸಿ ಬ್ಯಾಂಕಿಗೆ ಪಾವತಿಸಲು ಮುಂದಾಗಿದ್ದು, ಅಧಿಕಾರಿಗಳು ಜೆಸಿಬಿ ಎಲ್ಲಿದೆ ಎಂಬುದನ್ನು ತಿಳಿಸಿಲ್ಲ ಎಂದು ಹೇಳಿದರು.</p>.<p>ಈಗ ಜೆಸಿಬಿ ಹರಾಜು ಮಾಡಿ ಸಾಲದ ಮೊತ್ತಕ್ಕೆ ಜಮೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಸಾಲ ಮರುಪಾವತಿಗೆ ರೈತ ಸಿದ್ದವಿದ್ದರೂ ಅಧಿಕಾರಿಗಳು ಹರಾಜು ಮಾಡಿದ್ದಾರೆ. ಮಂಜುನಾಥ್ ಕುಟುಂಬಕ್ಕೆ ಜಿಲ್ಲಾಡಳಿತ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಉಪಾಧ್ಯಕ್ಷ ಕುಮಾರಸ್ವಾಮಿ, ಮುಖಂಡರಾದ ಯುವರಾಜ್, ರೈತ ಮಂಜುನಾಥ್, ರುದ್ರಮ್ಮ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಸಾಲದ ಕಂತು ಪಾವತಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡದೆ ಜೆಸಿಬಿ ವಶಕ್ಕೆ ಪಡೆದು ಹರಾಜು ಮಾಡಲಾಗಿದೆ. ಇದರಿಂದ ರೈತನಿಗೆ ಅನ್ಯಾಯವಾಗಿದೆ ಎಂದು ರೈತ ಸಂಘದ ಮುಖಂಡ ಗುರುಶಾಂತಪ್ಪ ಹೇಳಿದರು.</p>.<p>ತಾಲ್ಲೂಕಿನ ಗೌಡನಹಳ್ಳಿ ವಾಸಿ ಮಂಜುನಾಥ್ ಅವರು ಜೆಸಿಬಿ ಕೊಳ್ಳುವ ಉದ್ದೇಶದಿಂದ ನಗರದ ಎಂ.ಜಿ. ರಸ್ತೆಯಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ನಿಂದ 2023ರ ಡಿ. 12ರಂದು ₹29 ಲಕ್ಷ ಸಾಲ ಪಡೆದಿದ್ದರು. ಒಟ್ಟು ₹36 ಲಕ್ಷ ಬಂಡವಾಳ ಹೂಡಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಾಲದ ಕಂತು 58 ತಿಂಗಳು ಇದ್ದು, ಪ್ರತಿ ತಿಂಗಳು ₹65,065 ಪಾವತಿಸಲು ಒಪ್ಪಿಸಿದ್ದರು. ಅದರಂತೆ ಸಾಲದ ಕಂತು ₹17.50 ಲಕ್ಷ ಪಾವತಿಸಿದ್ದಾರೆ. ಆದರೆ, ಸಮಯಕ್ಕೆ ಸರಿಯಾಗಿ ಕಂತು ತೀರಿಸಲು ಸಾಧ್ಯವಾಗಿಲ್ಲ ಎಂಬ ನೆಪದಲ್ಲಿ ಜೆಸಿಬಿಯನ್ನು 6 ತಿಂಗಳ ಹಿಂದೆಯೇ ಜಪ್ತಿ ಮಾಡಿದ್ದರು.</p>.<p>ಬ್ಯಾಂಕಿಗೆ ಹೋಗಿ ವಿಚಾರಿಸಿದರೆ ₹50 ಲಕ್ಷ ಪಾವತಿಸಿರೆ ಜೆಸಿಬಿ ವಾಪಸ್ಸು ಕೊಡುವುದಾಗಿ ತಿಳಿಸಿದ್ದಾರೆ. ಖಾಸಗಿ ಸಾಲ ಪಡೆದು ₹50 ಲಕ್ಷ ಹೊಂದಿಸಿ ಬ್ಯಾಂಕಿಗೆ ಪಾವತಿಸಲು ಮುಂದಾಗಿದ್ದು, ಅಧಿಕಾರಿಗಳು ಜೆಸಿಬಿ ಎಲ್ಲಿದೆ ಎಂಬುದನ್ನು ತಿಳಿಸಿಲ್ಲ ಎಂದು ಹೇಳಿದರು.</p>.<p>ಈಗ ಜೆಸಿಬಿ ಹರಾಜು ಮಾಡಿ ಸಾಲದ ಮೊತ್ತಕ್ಕೆ ಜಮೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಸಾಲ ಮರುಪಾವತಿಗೆ ರೈತ ಸಿದ್ದವಿದ್ದರೂ ಅಧಿಕಾರಿಗಳು ಹರಾಜು ಮಾಡಿದ್ದಾರೆ. ಮಂಜುನಾಥ್ ಕುಟುಂಬಕ್ಕೆ ಜಿಲ್ಲಾಡಳಿತ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಉಪಾಧ್ಯಕ್ಷ ಕುಮಾರಸ್ವಾಮಿ, ಮುಖಂಡರಾದ ಯುವರಾಜ್, ರೈತ ಮಂಜುನಾಥ್, ರುದ್ರಮ್ಮ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>