<p><strong>ಮೂಡಿಗೆರೆ:</strong> ರೈತ ಸಂಘಟನೆ ಹೆಸರಿನಲ್ಲಿ ರೈತ ಮುಖಂಡರೊಬ್ಬರು ಅಧಿಕಾರಿಗಳ ದಿಕ್ಕು ತಪ್ಪಿಸಿ ನಿಯಮ ಬಾಹಿರವಾಗಿ ಪಕ್ಕಾಪೋಡು ಮಾಡಿಸಿ ನಮಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಬಿಳ್ಳೂರು ಗ್ರಾಮದ ಪಿ.ಎ.ಪುಟ್ಟಸ್ವಾಮಿಗೌಡ ನೇತೃತ್ವದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಅಶ್ವಿನಿ ಅವರಿಗೆ ದೂರು ಸಲ್ಲಿಸಿದರು.</p>.<p>ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿ.ಎ.ಪುಟ್ಟಸ್ವಾಮಿಗೌಡ, ತಾಲ್ಲೂಕಿನ ಕಡಿದಾಳು ಗ್ರಾಮದ ಸರ್ವೆ ನಂ.76/1 ರಲ್ಲಿ ತನಗೆ 10 ಎಕರೆ, ಪಿ.ಕೆ.ಕುಲದೀಪ್ ಅವರು 10 ಎಕರೆ, ಬಿ.ಕೆ.ಸರೋಜಮ್ಮ ಅವರು 10 ಎಕರೆ, ಎಂ.ಎ.ಶ್ಯಾಮಲ ಅವರು 9.20 ಎಕರೆ ಜಮೀನು ಹೊಂದಿದ್ದು, ಸ್ವಂತ ಖಾತೆ ಹಾಗೂ ಸ್ವಾಧೀನ ಅನುಭವದಲ್ಲಿರುತ್ತದೆ. ಈ ಜಮೀನುಗಳ ಪಕ್ಕದಲ್ಲಿ ಸರ್ವೆ ನಂ 76/2ಎ ರಲ್ಲಿ ರೈತ ಮುಖಂಡರೊಬ್ಬರ ಜಮೀನಿದ್ದು, ಅವರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ನಿಯಮ ಬಾಹಿರವಾಗಿ ಕಳೆದ 2 ತಿಂಗಳ ಹಿಂದೆ ನಮ್ಮ ಗಮನಕ್ಕೆ ಬಾರದೇ, ಯಾವುದೇ ನೋಟಿಸ್ ನೀಡದೇ ಪಕ್ಕಾಪೋಡು ಮಾಡಿದ್ದಾರೆ' ಎಂದು ದೂರಿದರು.</p>.<p>ಈ ಜಮೀನುಗಳ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ತೀರ್ಪು ಬರದೇ ಪಕ್ಕಾಪೋಡು ಮಾಡುವಂತಿಲ್ಲ. ಎಡಿಎಲ್ಆರ್ ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸದೇ ಪಕ್ಕಾಪೋಡು ಮಾಡಿದ್ದಾರೆ. ಇದರಿಂದ ಎಂ.ಎ.ಶ್ಯಾಮಲಗೆ ಸೇರಿದ 2 ಎಕರೆ ಜಮೀನಿನಲ್ಲಿ ರೈತ ಮುಖಂಡ ಕಾಫಿ ಕುಯ್ದು, ಕಾಫಿ ಗಿಡಗಳನ್ನು ಹಾಳು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ದಾಖಲೆಗಳನ್ನು ಪರಿಶೀಲಿಸಿ ಯಾವ ರೀತಿ ಪೋಡು ಮಾಡಿದ್ದಾರೆಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು. ಈಗ ಹೊಸದಾಗಿ ಆಗಿರುವ ಪೋಡನ್ನು ರದ್ದುಪಡಿಸಿ, ಮತ್ತೊಮ್ಮೆ ಪರಿಶೀಲಿಸಬೇಕು' ಎಂದು ಅವರು ಒತ್ತಾಯಿಸಿದರು.</p>.<p>ಗೋಷ್ಠಿಯಲ್ಲಿ ಪಿ.ಕೆ.ಕುಲದೀಪ್, ಬಿ.ಕೆ.ಸರೋಜಮ್ಮ, ಎಂ.ಎ.ಶ್ಯಾಮಲ, ರೈತ ಮುಖಂಡ ವಾಸುದೇವ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ರೈತ ಸಂಘಟನೆ ಹೆಸರಿನಲ್ಲಿ ರೈತ ಮುಖಂಡರೊಬ್ಬರು ಅಧಿಕಾರಿಗಳ ದಿಕ್ಕು ತಪ್ಪಿಸಿ ನಿಯಮ ಬಾಹಿರವಾಗಿ ಪಕ್ಕಾಪೋಡು ಮಾಡಿಸಿ ನಮಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಬಿಳ್ಳೂರು ಗ್ರಾಮದ ಪಿ.ಎ.ಪುಟ್ಟಸ್ವಾಮಿಗೌಡ ನೇತೃತ್ವದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಅಶ್ವಿನಿ ಅವರಿಗೆ ದೂರು ಸಲ್ಲಿಸಿದರು.</p>.<p>ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿ.ಎ.ಪುಟ್ಟಸ್ವಾಮಿಗೌಡ, ತಾಲ್ಲೂಕಿನ ಕಡಿದಾಳು ಗ್ರಾಮದ ಸರ್ವೆ ನಂ.76/1 ರಲ್ಲಿ ತನಗೆ 10 ಎಕರೆ, ಪಿ.ಕೆ.ಕುಲದೀಪ್ ಅವರು 10 ಎಕರೆ, ಬಿ.ಕೆ.ಸರೋಜಮ್ಮ ಅವರು 10 ಎಕರೆ, ಎಂ.ಎ.ಶ್ಯಾಮಲ ಅವರು 9.20 ಎಕರೆ ಜಮೀನು ಹೊಂದಿದ್ದು, ಸ್ವಂತ ಖಾತೆ ಹಾಗೂ ಸ್ವಾಧೀನ ಅನುಭವದಲ್ಲಿರುತ್ತದೆ. ಈ ಜಮೀನುಗಳ ಪಕ್ಕದಲ್ಲಿ ಸರ್ವೆ ನಂ 76/2ಎ ರಲ್ಲಿ ರೈತ ಮುಖಂಡರೊಬ್ಬರ ಜಮೀನಿದ್ದು, ಅವರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ನಿಯಮ ಬಾಹಿರವಾಗಿ ಕಳೆದ 2 ತಿಂಗಳ ಹಿಂದೆ ನಮ್ಮ ಗಮನಕ್ಕೆ ಬಾರದೇ, ಯಾವುದೇ ನೋಟಿಸ್ ನೀಡದೇ ಪಕ್ಕಾಪೋಡು ಮಾಡಿದ್ದಾರೆ' ಎಂದು ದೂರಿದರು.</p>.<p>ಈ ಜಮೀನುಗಳ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ತೀರ್ಪು ಬರದೇ ಪಕ್ಕಾಪೋಡು ಮಾಡುವಂತಿಲ್ಲ. ಎಡಿಎಲ್ಆರ್ ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸದೇ ಪಕ್ಕಾಪೋಡು ಮಾಡಿದ್ದಾರೆ. ಇದರಿಂದ ಎಂ.ಎ.ಶ್ಯಾಮಲಗೆ ಸೇರಿದ 2 ಎಕರೆ ಜಮೀನಿನಲ್ಲಿ ರೈತ ಮುಖಂಡ ಕಾಫಿ ಕುಯ್ದು, ಕಾಫಿ ಗಿಡಗಳನ್ನು ಹಾಳು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ದಾಖಲೆಗಳನ್ನು ಪರಿಶೀಲಿಸಿ ಯಾವ ರೀತಿ ಪೋಡು ಮಾಡಿದ್ದಾರೆಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು. ಈಗ ಹೊಸದಾಗಿ ಆಗಿರುವ ಪೋಡನ್ನು ರದ್ದುಪಡಿಸಿ, ಮತ್ತೊಮ್ಮೆ ಪರಿಶೀಲಿಸಬೇಕು' ಎಂದು ಅವರು ಒತ್ತಾಯಿಸಿದರು.</p>.<p>ಗೋಷ್ಠಿಯಲ್ಲಿ ಪಿ.ಕೆ.ಕುಲದೀಪ್, ಬಿ.ಕೆ.ಸರೋಜಮ್ಮ, ಎಂ.ಎ.ಶ್ಯಾಮಲ, ರೈತ ಮುಖಂಡ ವಾಸುದೇವ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>