<p><strong>ಸೀತೂರು (ನರಸಿಂಹರಾಜಪುರ):</strong> ‘ಇತ್ತೀಚಿನ ವರ್ಷಗಳಲ್ಲಿ ಯುವಜನರಲ್ಲಿ ಓದುವ ಸಂಸ್ಕೃತಿ ಮರೆಯಾಗುತ್ತಿದೆ. ಯುವಕರು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಹೇಳಿದರು.</p>.<p>ತಾಲ್ಲೂಕಿನ ಸೀತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪುಸ್ತಕಗಳನ್ನು ಓದುವುದರಿಂದ ಜ್ಞಾನದ ಮಟ್ಟ ಹೆಚ್ಚಾಗುತ್ತದೆ. ಕನ್ನಡ ಭಾಷೆಯ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕವಾಗಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದರು.</p>.<p>ಸೀತೂರು ವಿ.ಎಸ್.ಎಸ್.ಎನ್. ಅಧ್ಯಕ್ಷ ಬಿ.ಪಿ. ಮೋಹನ್ ಮಾತನಾಡಿ, ಚಿಕ್ಕ ಮಕ್ಕಳು ಮೊಬೈಲ್ ಗೀಳಿಗೆ ಬಲಿಯಾಗುತ್ತಿರುವುದು ವಿಷಾದಕರ. ತಂದೆ ತಾಯಿ ಮಕ್ಕಳ ಕೈಗೆ ಮೊಬೈಲ್ ನೀಡುವ ಮುನ್ನ ಜಾಗೃತೆ ವಹಿಸಬೇಕು. ಯುವಕ– ಯುವತಿಯರು ಅಗತ್ಯವಿದ್ದಷ್ಟು ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದಿನಕರ ನಾಯ್ಕ ಮಾತನಾಡಿ, ಎನ್ಎಸ್ಎಸ್ ಶಿಬಿರಾರ್ಥಿಗಳು 7 ದಿನಗಳ ಶಿಬಿರದಲ್ಲಿ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು ಎಂದರು.</p>.<p>ಸೀತೂರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ, ಸದಸ್ಯೆ ವಿಶಾಲಾಕ್ಷಿ, ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಸತೀಶ್, ಶಂಕರ ನಾಯ್ಕ ಇದ್ದರು.</p>
<p><strong>ಸೀತೂರು (ನರಸಿಂಹರಾಜಪುರ):</strong> ‘ಇತ್ತೀಚಿನ ವರ್ಷಗಳಲ್ಲಿ ಯುವಜನರಲ್ಲಿ ಓದುವ ಸಂಸ್ಕೃತಿ ಮರೆಯಾಗುತ್ತಿದೆ. ಯುವಕರು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಹೇಳಿದರು.</p>.<p>ತಾಲ್ಲೂಕಿನ ಸೀತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪುಸ್ತಕಗಳನ್ನು ಓದುವುದರಿಂದ ಜ್ಞಾನದ ಮಟ್ಟ ಹೆಚ್ಚಾಗುತ್ತದೆ. ಕನ್ನಡ ಭಾಷೆಯ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕವಾಗಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದರು.</p>.<p>ಸೀತೂರು ವಿ.ಎಸ್.ಎಸ್.ಎನ್. ಅಧ್ಯಕ್ಷ ಬಿ.ಪಿ. ಮೋಹನ್ ಮಾತನಾಡಿ, ಚಿಕ್ಕ ಮಕ್ಕಳು ಮೊಬೈಲ್ ಗೀಳಿಗೆ ಬಲಿಯಾಗುತ್ತಿರುವುದು ವಿಷಾದಕರ. ತಂದೆ ತಾಯಿ ಮಕ್ಕಳ ಕೈಗೆ ಮೊಬೈಲ್ ನೀಡುವ ಮುನ್ನ ಜಾಗೃತೆ ವಹಿಸಬೇಕು. ಯುವಕ– ಯುವತಿಯರು ಅಗತ್ಯವಿದ್ದಷ್ಟು ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದಿನಕರ ನಾಯ್ಕ ಮಾತನಾಡಿ, ಎನ್ಎಸ್ಎಸ್ ಶಿಬಿರಾರ್ಥಿಗಳು 7 ದಿನಗಳ ಶಿಬಿರದಲ್ಲಿ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು ಎಂದರು.</p>.<p>ಸೀತೂರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ, ಸದಸ್ಯೆ ವಿಶಾಲಾಕ್ಷಿ, ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಸತೀಶ್, ಶಂಕರ ನಾಯ್ಕ ಇದ್ದರು.</p>