<p><strong>ಚಿಕ್ಕಮಗಳೂರು</strong>: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿದ್ದು, ಇದರಲ್ಲಿ ಭಾರತ ಜಯ ಗಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.<p>ಶುಕ್ರವಾರ ಪಿಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಡಿ.ನವೀನ್ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು, ‘ನಾವು ಇಲ್ಲಿ ಗೆಲ್ಲುವುದು ಮುಖ್ಯವಾದರೆ ಅದಕ್ಕಿಂತ ಮುಖ್ಯವಾಗಿ ಭಾರತ ದೇಶ ಗೆಲ್ಲಬೇಕು. ಆ ಗೆಲುವಿಗೆ ಪೂರಕವಾಗಿ ಇಲ್ಲಿರುವ ಎಲ್ಲಾ ಗ್ರಾ.ಪಂ ಸದಸ್ಯರ ವಿಶ್ವಾಸ ಪಡೆದು ದೇಶ ಮುಖ್ಯ ಎಂದುಕೊಂಡು ಜನರ ವೈಯಕ್ತಿಕ ಸಮಸ್ಯೆ ಬಗೆಹರಿಸಲು ಕೆಲಸ ಮಾಡಬೇಕು’ ಎಂದರು.</p>.<p>ಅಧ್ಯಕ್ಷರಾಗುವುದು ಎಷ್ಟು ಮುಖ್ಯವೋ, ಒಳ್ಳೆಯ ಹೆಸರು ಗಳಿಸುವಂತೆ ಕೆಲಸ ಮಾಡುವುದು ಅಷ್ಟೇ ಮುಖ್ಯ. ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.</p>.<p>ಗ್ರಾ.ಪಂ ಉಪಾಧ್ಯಕ್ಷೆ ಶಾರದಮ್ಮ, ಸದಸ್ಯರಾದ ಪಿ.ಎನ್. ರಮೇಶ್, ಮಹೇಶ್ವರಾಚಾರ್, ಬಿ.ಎಚ್.ಶಶಿಧರ, ನಾಗರಾಜನಾಯ್ಕ, ಭಾಗ್ಯ, ಪವಿತ್ರ, ಸಾವಿತ್ರಮ್ಮ, ಸೌಂದರ್ಯ, ಮುಖಂಡ ಪಿಳ್ಳೇನಹಳ್ಳಿ ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿದ್ದು, ಇದರಲ್ಲಿ ಭಾರತ ಜಯ ಗಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.<p>ಶುಕ್ರವಾರ ಪಿಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಡಿ.ನವೀನ್ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು, ‘ನಾವು ಇಲ್ಲಿ ಗೆಲ್ಲುವುದು ಮುಖ್ಯವಾದರೆ ಅದಕ್ಕಿಂತ ಮುಖ್ಯವಾಗಿ ಭಾರತ ದೇಶ ಗೆಲ್ಲಬೇಕು. ಆ ಗೆಲುವಿಗೆ ಪೂರಕವಾಗಿ ಇಲ್ಲಿರುವ ಎಲ್ಲಾ ಗ್ರಾ.ಪಂ ಸದಸ್ಯರ ವಿಶ್ವಾಸ ಪಡೆದು ದೇಶ ಮುಖ್ಯ ಎಂದುಕೊಂಡು ಜನರ ವೈಯಕ್ತಿಕ ಸಮಸ್ಯೆ ಬಗೆಹರಿಸಲು ಕೆಲಸ ಮಾಡಬೇಕು’ ಎಂದರು.</p>.<p>ಅಧ್ಯಕ್ಷರಾಗುವುದು ಎಷ್ಟು ಮುಖ್ಯವೋ, ಒಳ್ಳೆಯ ಹೆಸರು ಗಳಿಸುವಂತೆ ಕೆಲಸ ಮಾಡುವುದು ಅಷ್ಟೇ ಮುಖ್ಯ. ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.</p>.<p>ಗ್ರಾ.ಪಂ ಉಪಾಧ್ಯಕ್ಷೆ ಶಾರದಮ್ಮ, ಸದಸ್ಯರಾದ ಪಿ.ಎನ್. ರಮೇಶ್, ಮಹೇಶ್ವರಾಚಾರ್, ಬಿ.ಎಚ್.ಶಶಿಧರ, ನಾಗರಾಜನಾಯ್ಕ, ಭಾಗ್ಯ, ಪವಿತ್ರ, ಸಾವಿತ್ರಮ್ಮ, ಸೌಂದರ್ಯ, ಮುಖಂಡ ಪಿಳ್ಳೇನಹಳ್ಳಿ ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>