‘ಕಳೆದ ವರ್ಷ ಕೂಡ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತೋಟಗಾರಿಕೆಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಬೆಳೆ ಹಾನಿ ಬಗ್ಗೆ ನಿಖರವಾದ ಮಾಹಿತಿಯನ್ನು ಸರ್ಕಾರದ ಮೂಲಕ ಸಂಬಂಧಪಟ್ಟ ವಿಮಾ ಕಂಪನಿಗಳಿಗೆ ಕಳುಹಿಸಿದ್ದಾರೆ. ಆದರೆ ವಿಮಾ ಕಂಪನಿ ಅದನ್ನು ಪರಿಗಣಿಸದೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದೊಂದು ಮಾನದಂಡ ನಿಗದಿಪಡಿಸಿ, ಅಲ್ಪ ಪ್ರಮಾಣದ ಹಣವನ್ನು ಬಿಡುಗಡೆ ಮಾಡಿದೆ. ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಅವರು ಕಟ್ಟಿದ ಹಣದ ಶೇ 3.71, ಅಗಳಗಂಡಿ ಗ್ರಾಮದ ರೈತರಿಗೆ ಶೇ 2.03, ಹೇರೂರು ಗ್ರಾಮದ ರೈತರಿಗೆ ಶೇ 1.71 ಹೀಗೆ ವಿಮಾ ಹಣವನ್ನು ರೈತರ ಖಾತೆಗಳಿಗೆ ಹಾಕಲಾಗಿದೆ. ಇದು ಆನೆ ಹೊಟ್ಟಿಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದ್ದು ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿದ್ದಾರೆ.