<p><strong>ಚಿಕ್ಕಮಗಳೂರು:</strong> ಕೋವಿಡ್–19 ನಿಟ್ಟಿನಲ್ಲಿ ಕಾರ್ಯನಿರತ ಸರ್ಕಾರಿ ವೈದ್ಯರಿಗೆ ಘೋಷಿಸಿರುವ ₹ 50 ಲಕ್ಷ ವಿಮೆ ಸವಲತ್ತನ್ನು ಖಾಸಗಿ ವೈದ್ಯರಿಗೂ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.</p>.<p>ಮಾಧ್ಯಮದವರು ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಾರೆ. ಅವರಿಗೆ ಕೋವಿಡ್–19 ದೃಢಪಟ್ಟರೆ ನಿಗದಿತ ಆಸ್ಪತ್ರೆ ವ್ಯವಸ್ಥೆ ಮಾಡಿ, ಚಿಕಿತ್ಸೆ ನೀಡುವ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ ಎಂದು ಉತ್ತರಿಸಿದರು.</p>.<p>ಕೊರೊನಾ ಎಷ್ಟು ಕಾಲ ಇರುತ್ತೆ ಎಂಬುದು ಗೊತ್ತಿಲ್ಲ. ಇನ್ನು ಆರು ತಿಂಗಳು ಜನರ ಸೇವೆ ಮಾಡಲು ಮಾನಸಿಕವಾಗಿ ಈಗಲೇ ತಯಾರಾಗುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕೋವಿಡ್–19 ನಿಟ್ಟಿನಲ್ಲಿ ಕಾರ್ಯನಿರತ ಸರ್ಕಾರಿ ವೈದ್ಯರಿಗೆ ಘೋಷಿಸಿರುವ ₹ 50 ಲಕ್ಷ ವಿಮೆ ಸವಲತ್ತನ್ನು ಖಾಸಗಿ ವೈದ್ಯರಿಗೂ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.</p>.<p>ಮಾಧ್ಯಮದವರು ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಾರೆ. ಅವರಿಗೆ ಕೋವಿಡ್–19 ದೃಢಪಟ್ಟರೆ ನಿಗದಿತ ಆಸ್ಪತ್ರೆ ವ್ಯವಸ್ಥೆ ಮಾಡಿ, ಚಿಕಿತ್ಸೆ ನೀಡುವ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ ಎಂದು ಉತ್ತರಿಸಿದರು.</p>.<p>ಕೊರೊನಾ ಎಷ್ಟು ಕಾಲ ಇರುತ್ತೆ ಎಂಬುದು ಗೊತ್ತಿಲ್ಲ. ಇನ್ನು ಆರು ತಿಂಗಳು ಜನರ ಸೇವೆ ಮಾಡಲು ಮಾನಸಿಕವಾಗಿ ಈಗಲೇ ತಯಾರಾಗುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>