<p><strong>ಬಾಳೆಹೊನ್ನೂರು</strong>: ಪಟ್ಟಣದಲ್ಲಿ ಡಿ. 18ರಂದು ರಾತ್ರಿ 4 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒರ್ವ ಆರೋಪಿ ಪರಾರಿಯಾಗಿದ್ದು ಬಂಧಿತರಿಂದ ₹4,10,985 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ಶಿವಮೊಗ್ಗ ವಾಸಿ ಆರ್.ಕರುಣ, ಕೋಟೆ ಹೊಸದುರ್ಗ ನಿವಾಸಿ ಹಸೈನ್ ಎಂಬುವರನ್ನು ಬಂಧಿಸಿರುವ ಪೊಲೀಸರು ಅವರಿಂದ ಕೃತ್ಯಕ್ಕೆ ಬಳಸಿದ್ದ ಸ್ವಿಪ್ಟ್ ಕಾರು, ಕಳುವು ಮಾಡಿದ್ದ ಟಿವಿ, ವಾಚ್, ನಗದು, ಹೋಂ ಥೀಯೇಟರ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿಗಳು ಅಂತರರಾಜ್ಯ ಕಳ್ಳರಾಗಿದ್ದು, ಈ ಹಿಂದೆ ಆಂಧ್ರ, ಕರ್ನಾಟಕದ ಉಡುಪಿ, ಸಾಗರ, ಕಡೂರು, ಅಜ್ಜಂಪುರ ಸೇರಿದಂತೆ 50ಕ್ಕೂ ಹೆಚ್ಚು ಕಡೆ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕಾರ್ಯಾಚರಣೆಯಲ್ಲಿ ಪಿಎಸ್ಐ ರವೀಶ್, ಸಿಬ್ಬಂದಿಗಳಾದ ಕೆ.ಜೆ.ಶಂಕರ್, ಜಯರಾಂ, ಮಂಜುನಾಥ್, ವಿನಾಯಕ, ಮನು, ಮಂಜುನಾಥ್ ಗುಗ್ಗರಿ, ಕಿರಣ್, ಭೀಮ್ಸೇನ, ಚೆನ್ನಯ್ಯ, ಚಾಲಕ ಕಾರ್ತಿಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ಪಟ್ಟಣದಲ್ಲಿ ಡಿ. 18ರಂದು ರಾತ್ರಿ 4 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒರ್ವ ಆರೋಪಿ ಪರಾರಿಯಾಗಿದ್ದು ಬಂಧಿತರಿಂದ ₹4,10,985 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ಶಿವಮೊಗ್ಗ ವಾಸಿ ಆರ್.ಕರುಣ, ಕೋಟೆ ಹೊಸದುರ್ಗ ನಿವಾಸಿ ಹಸೈನ್ ಎಂಬುವರನ್ನು ಬಂಧಿಸಿರುವ ಪೊಲೀಸರು ಅವರಿಂದ ಕೃತ್ಯಕ್ಕೆ ಬಳಸಿದ್ದ ಸ್ವಿಪ್ಟ್ ಕಾರು, ಕಳುವು ಮಾಡಿದ್ದ ಟಿವಿ, ವಾಚ್, ನಗದು, ಹೋಂ ಥೀಯೇಟರ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿಗಳು ಅಂತರರಾಜ್ಯ ಕಳ್ಳರಾಗಿದ್ದು, ಈ ಹಿಂದೆ ಆಂಧ್ರ, ಕರ್ನಾಟಕದ ಉಡುಪಿ, ಸಾಗರ, ಕಡೂರು, ಅಜ್ಜಂಪುರ ಸೇರಿದಂತೆ 50ಕ್ಕೂ ಹೆಚ್ಚು ಕಡೆ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕಾರ್ಯಾಚರಣೆಯಲ್ಲಿ ಪಿಎಸ್ಐ ರವೀಶ್, ಸಿಬ್ಬಂದಿಗಳಾದ ಕೆ.ಜೆ.ಶಂಕರ್, ಜಯರಾಂ, ಮಂಜುನಾಥ್, ವಿನಾಯಕ, ಮನು, ಮಂಜುನಾಥ್ ಗುಗ್ಗರಿ, ಕಿರಣ್, ಭೀಮ್ಸೇನ, ಚೆನ್ನಯ್ಯ, ಚಾಲಕ ಕಾರ್ತಿಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>