ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದ ಎನ್.ಆರ್.ಪುರ, ಕೊಪ್ಪ, ಬಾಳೆಹೊನ್ನೂರು, ಶೃಂಗೇರಿ ಭಾಗದಲ್ಲಿ 'ಜಿಯೊ', 'ಏರ್ ಟೆಲ್' ಇಂಟರ್ ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಕಾವು ಏರಿರುವ ನಿಮಿತ್ತ ಕಾಫಿನಾಡಿನ ಮಲೆನಾಡು ಭಾಗದ ಕೆಲವೆಡೆ ಜಿಯೊ, ಏರ್ ಟೆಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಗ್ರಾಹಕರಿಗೆ ಎಸ್ಎಂಎಸ್ ರವಾನಿಸಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ಸೇವೆ ಕಡಿತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.ದೂರವಾಣಿ ಸಂಪರ್ಕ ಮಾಮೂಲಿಯಂತೆ ಇದೆ.ಬಿಎಸ್ಎನ್ಎಲ್ ಇಂಟರ್ನೆಟ್ ಸೇವೆ ಲಭ್ಯ ಇದೆ.