<p><strong>ಕಳಸ:</strong> ಪಟ್ಟಣದಲ್ಲಿ ಮೇ 18ರಂದು ನಡೆಯುವ ರಾಜ್ಯ ಮಟ್ಟದ ಪ್ರಥಮ ಜೈನ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು.</p>.<p>ಚಂದ್ರನಾಥ ಬಸದಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸಿ ಧರಣೇಂದ್ರಯ್ಯ ಮಾತನಾಡಿ, ‘ಚಂದ್ರನಾಥ ಬಸದಿ ಪಂಚಕಲ್ಯಾಣದ ಸಂದರ್ಭದಲ್ಲಿ ವಿಶಿಷ್ಟಪೂರ್ಣವಾದ ಜೈನ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಾಹಿತ್ಯ ಪರಿಷತ್ತು ಇಂಗಿತ ವ್ಯಕ್ತಪಡಿಸಿತು. ಜೀರ್ಣೋದ್ಧಾರ ಸಮಿತಿಯ ಸಹಕಾರದೊಂದಿಗೆ ಸಾಹಿತ್ಯ ಸಮ್ಮಳನ ನಡೆಯಲಿದೆ’ ಎಂದರು.</p>.<p>ಸಾಹಿತ್ಯ ಪರಿಷತ್ತಿನ ಕಳಸ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ಚಂದ್ರ ಮಾತನಾಡಿ, ‘ಸಮ್ಮೇಳನಾಧ್ಯಕ್ಷ ಶ್ರೀವರ್ಮ ಹೆಗ್ಗಡೆ ಅವರ ಮೆರವಣಿಗೆ ಅಂದು ಬೆಳಿಗ್ಗೆ 7.30ಕ್ಕೆ ನಡೆಯಲಿದೆ.ನಂತರ ಭೈರವರಸ ವೇದಿಕೆಯಲ್ಲಿ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಇತಿಹಾಸ, ಕವಿ ಗೋಷ್ಠಿ ನಡೆಯಲಿದೆ ಎಂದರು.</p>.<p>ಮಧ್ಯಾಹ್ನ 2 ಗಂಟೆಗೆ ಸಮ್ಮೇಳನದ ಸಮಾರೋಪ ನಡೆಯಲಿದೆ. ಶ್ರೀವರ್ಮ ಹೆಗ್ಗಡೆ ಅಧ್ಯಕ್ಷ ಭಾಷಣ ಮಾಡುವರು. ಮೂವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಮತ್ತು 18 ಜನರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.</p>.<p>ಜೀರ್ಣೋದ್ಧಾರ ಸಮಿತಿಯ ನಿರ್ಮಲ್ ಕುಮಾರ್, ಅಜಿತ್, ಸುರೇಶ್, ಧರಣೇಂದ್ರ, ಹರ್ಷೇಂದ್ರ, ಅಣ್ಣಯ್ಯ, ಜ್ವಾಲಾನಯ್ಯ, ಸಾಹಿತ್ಯ ಪರಿಷತ್ತಿನ ಪಾಂಡುರಂಗ, ಮಮ್ತಾಜ್ ಬೇಗಂ, ಶಶಿಕಲಾ, ಸುಮನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ:</strong> ಪಟ್ಟಣದಲ್ಲಿ ಮೇ 18ರಂದು ನಡೆಯುವ ರಾಜ್ಯ ಮಟ್ಟದ ಪ್ರಥಮ ಜೈನ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು.</p>.<p>ಚಂದ್ರನಾಥ ಬಸದಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸಿ ಧರಣೇಂದ್ರಯ್ಯ ಮಾತನಾಡಿ, ‘ಚಂದ್ರನಾಥ ಬಸದಿ ಪಂಚಕಲ್ಯಾಣದ ಸಂದರ್ಭದಲ್ಲಿ ವಿಶಿಷ್ಟಪೂರ್ಣವಾದ ಜೈನ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಾಹಿತ್ಯ ಪರಿಷತ್ತು ಇಂಗಿತ ವ್ಯಕ್ತಪಡಿಸಿತು. ಜೀರ್ಣೋದ್ಧಾರ ಸಮಿತಿಯ ಸಹಕಾರದೊಂದಿಗೆ ಸಾಹಿತ್ಯ ಸಮ್ಮಳನ ನಡೆಯಲಿದೆ’ ಎಂದರು.</p>.<p>ಸಾಹಿತ್ಯ ಪರಿಷತ್ತಿನ ಕಳಸ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ಚಂದ್ರ ಮಾತನಾಡಿ, ‘ಸಮ್ಮೇಳನಾಧ್ಯಕ್ಷ ಶ್ರೀವರ್ಮ ಹೆಗ್ಗಡೆ ಅವರ ಮೆರವಣಿಗೆ ಅಂದು ಬೆಳಿಗ್ಗೆ 7.30ಕ್ಕೆ ನಡೆಯಲಿದೆ.ನಂತರ ಭೈರವರಸ ವೇದಿಕೆಯಲ್ಲಿ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಇತಿಹಾಸ, ಕವಿ ಗೋಷ್ಠಿ ನಡೆಯಲಿದೆ ಎಂದರು.</p>.<p>ಮಧ್ಯಾಹ್ನ 2 ಗಂಟೆಗೆ ಸಮ್ಮೇಳನದ ಸಮಾರೋಪ ನಡೆಯಲಿದೆ. ಶ್ರೀವರ್ಮ ಹೆಗ್ಗಡೆ ಅಧ್ಯಕ್ಷ ಭಾಷಣ ಮಾಡುವರು. ಮೂವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಮತ್ತು 18 ಜನರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.</p>.<p>ಜೀರ್ಣೋದ್ಧಾರ ಸಮಿತಿಯ ನಿರ್ಮಲ್ ಕುಮಾರ್, ಅಜಿತ್, ಸುರೇಶ್, ಧರಣೇಂದ್ರ, ಹರ್ಷೇಂದ್ರ, ಅಣ್ಣಯ್ಯ, ಜ್ವಾಲಾನಯ್ಯ, ಸಾಹಿತ್ಯ ಪರಿಷತ್ತಿನ ಪಾಂಡುರಂಗ, ಮಮ್ತಾಜ್ ಬೇಗಂ, ಶಶಿಕಲಾ, ಸುಮನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>