‘ರಸ್ತೆ ಬದಿಯಲ್ಲಿ ಪೈಪ್ ಅಳವಡಿಸಲು ತೋಡಿದ ಗುಂಡಿಯನ್ನು ಕೆಲವು ಕಡೆಗಳಲ್ಲಿ ಮುಚ್ಚದೆ ಹಾಗೆ ಬಿಡಲಾಗಿದೆ. ಈ ಯೋಜನೆಯಡಿ ಕೊಳವೆಬಾವಿ, ಟ್ಯಾಂಕ್ ನಿರ್ಮಾಣ ಮಾಡಬೇಕಾಗಿತ್ತು. ಅದನ್ನು ಮಾಡದೆ ಶೇ25ರಷ್ಟು ಮಾತ್ರ ಕಳಪೆ ಕಾಮಗಾರಿ ಮಾಡಿ ₹18.80 ಲಕ್ಷ ಬಿಲ್ ಮಾಡಿಸಿಕೊಂಡ ಗುತ್ತಿಗೆದಾರರು ಮತ್ತೆ ಈ ಕಡೆ ತಿರುಗಿ ನೋಡಿಲ್ಲ. ದೂರವಾಣಿ ಕರೆಯೂ ಸ್ವೀಕರಿಸುತ್ತಿಲ್ಲ. ಈ ಬಗ್ಗೆ ಚಿಕ್ಕಮಗಳೂರಿನ ಎ.ಇ.ಇ ಹಾಗೂ ನರಸಿಂಹರಾಜಪುರ ಎ.ಇ.ಇ ಅವರಿಗೆ ದೂರು ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಲಾಗುವುದು. ಗ್ರಾಮ ಪಂಚಾಯಿತಿ ಪೈಪ್ ಲೈನ್ ಹಾಳು ಮಾಡಿರುವುದಕ್ಕೆ ಗುತ್ತಿಗೆದಾರರಿಗೆ ದಂಡ ಹಾಕಬೇಕು. ಕಳಪೆ ಕಾಮಗಾರಿ ಮಾಡಿರುವುದಕ್ಕೆ ಸಂಬಂಧಪಟ್ಟವರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.