<p><strong>ಕಡೂರು</strong>: ‘ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ಜೆಡಿಎಸ್ ಪಕ್ಷ ಬೆಂಬಲಿಸುವ ನಿರ್ಧಾರವನ್ನು ಸ್ಥಳೀಯ ನಾಯಕರ ಸಭೆಯಲ್ಲಿ ಕೈಗೊಳ್ಳಲಾಗಿದೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಹೇಳಿದರು.</p>.<p>ಪಟ್ಟಣದ ಟಿಡಿಎಸ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘12 ವರ್ಷಗಳ ಹಿಂದೆ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಜೆಡಿಎಸ್ ಪಕ್ಷ ಕಾಂಗ್ರೆಸ್ ಬೆಂಬಲಿಸಿ ಆಗ ಗಾಯತ್ರಿ ಶಾಂತೇಗೌಡರು ವಿಜೇತರಾಗಿದ್ದರು. 2016ರಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೂ ಸ್ಪರ್ಧಿಸಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆಗ ಜಾತ್ಯತೀತ ಮತ ವಿಭಜನೆಯಿಂದ ಬಿಜೆಪಿ ಅಭ್ಯರ್ಥಿ ಜಯ ಗಳಿಸಿದ್ದರು. ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಮ್ಮ ಜಿಲ್ಲೆಯಲ್ಲಿ ಸ್ಪರ್ಧಿಸಿಲ್ಲ. ರಾಜ್ಯದ ಆರು ಕಡೆ ನಮ್ಮ ಅಭ್ಯರ್ಥಿಗಳಿದ್ದಾರೆ. ಉಳಿದೆಡೆ ಜೆಡಿಎಸ್ ಪಕ್ಷ ಯಾರಿಗೆ ಬೆಂಬಲಿಸಬೇಕೆಂಬ ಸ್ಪಷ್ಟ ನಿರ್ಧಾರವನ್ನು ಪಕ್ಷ ವರಿಷ್ಠರು ತೆಗೆದುಕೊಂಡಿಲ್ಲ. ಆದರೆ, ಈ ಕ್ಷೇತ್ರದ ಮಟ್ಟಿಗೆ ಪಕ್ಷದ ಕಾರ್ಯಕರ್ತರು ತಾತ್ವಿಕ ನಿಲುವು ತೆಗೆದುಕೊಂಡಿದ್ದಾರೆ. ಪಕ್ಷದ ನಿಲುವು ಏನಿದ್ದರೂ ಜಾತ್ಯತೀತ ಶಕ್ತಿ ಗೆಲ್ಲಬೇಕು ಮತ್ತು ಕೋಮುವಾದಿ ಮನೋಭಾವದ ಪಕ್ಷ ಸೋಲಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಗಾಯತ್ರಿ ಶಾಂತೇಗೌಡರಿಗೆ ಬೆಂಬಲ ಘೋಷಿಸಲಾಗಿದೆ’ ಎಂದು ಪ್ರಕಟಿಸಿದರು.</p>.<p>ಗಾಯತ್ರಿ ಶಾಂತೇಗೌಡ ಮಾತನಾಡಿ, ‘ಜೆಡಿಎಸ್ ಪಕ್ಷದ ಬೆಂಬಲ ನಮಗೆ ಮತ್ತಷ್ಟು ಬಲ ಬಂದಿದೆ. ಚುನಾವಣೆಯಲ್ಲಿ ಗೆಲ್ಲುವ ಆತ್ಮಸ್ಥೈರ್ಯ ಹೆಚ್ಚಿದೆ’ ಎಂದರು.</p>.<p>ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ‘ಜಾತ್ಯತೀತ ಮನಸ್ಸುಗಳು ಒಂದಾಗಿರುವುದರಿಂದ ಗಾಯತ್ರಿ ಶಾಂತೇಗೌಡರ ಆಯ್ಕೆಯಾಗುವುದು ಖಚಿತ’ ಎಂದರು.</p>.<p>ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್, ಸದಸ್ಯ ಮರುಗುದ್ದಿ ಮನು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ಮುಖಂಡರಾದ ಯರದಕೆರೆ ರಾಜಪ್ಪ, ಕಂಸಾಗರ ಶೇಖರಪ್ಪ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರೇಂ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ‘ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ಜೆಡಿಎಸ್ ಪಕ್ಷ ಬೆಂಬಲಿಸುವ ನಿರ್ಧಾರವನ್ನು ಸ್ಥಳೀಯ ನಾಯಕರ ಸಭೆಯಲ್ಲಿ ಕೈಗೊಳ್ಳಲಾಗಿದೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಹೇಳಿದರು.</p>.<p>ಪಟ್ಟಣದ ಟಿಡಿಎಸ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘12 ವರ್ಷಗಳ ಹಿಂದೆ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಜೆಡಿಎಸ್ ಪಕ್ಷ ಕಾಂಗ್ರೆಸ್ ಬೆಂಬಲಿಸಿ ಆಗ ಗಾಯತ್ರಿ ಶಾಂತೇಗೌಡರು ವಿಜೇತರಾಗಿದ್ದರು. 2016ರಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೂ ಸ್ಪರ್ಧಿಸಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆಗ ಜಾತ್ಯತೀತ ಮತ ವಿಭಜನೆಯಿಂದ ಬಿಜೆಪಿ ಅಭ್ಯರ್ಥಿ ಜಯ ಗಳಿಸಿದ್ದರು. ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಮ್ಮ ಜಿಲ್ಲೆಯಲ್ಲಿ ಸ್ಪರ್ಧಿಸಿಲ್ಲ. ರಾಜ್ಯದ ಆರು ಕಡೆ ನಮ್ಮ ಅಭ್ಯರ್ಥಿಗಳಿದ್ದಾರೆ. ಉಳಿದೆಡೆ ಜೆಡಿಎಸ್ ಪಕ್ಷ ಯಾರಿಗೆ ಬೆಂಬಲಿಸಬೇಕೆಂಬ ಸ್ಪಷ್ಟ ನಿರ್ಧಾರವನ್ನು ಪಕ್ಷ ವರಿಷ್ಠರು ತೆಗೆದುಕೊಂಡಿಲ್ಲ. ಆದರೆ, ಈ ಕ್ಷೇತ್ರದ ಮಟ್ಟಿಗೆ ಪಕ್ಷದ ಕಾರ್ಯಕರ್ತರು ತಾತ್ವಿಕ ನಿಲುವು ತೆಗೆದುಕೊಂಡಿದ್ದಾರೆ. ಪಕ್ಷದ ನಿಲುವು ಏನಿದ್ದರೂ ಜಾತ್ಯತೀತ ಶಕ್ತಿ ಗೆಲ್ಲಬೇಕು ಮತ್ತು ಕೋಮುವಾದಿ ಮನೋಭಾವದ ಪಕ್ಷ ಸೋಲಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಗಾಯತ್ರಿ ಶಾಂತೇಗೌಡರಿಗೆ ಬೆಂಬಲ ಘೋಷಿಸಲಾಗಿದೆ’ ಎಂದು ಪ್ರಕಟಿಸಿದರು.</p>.<p>ಗಾಯತ್ರಿ ಶಾಂತೇಗೌಡ ಮಾತನಾಡಿ, ‘ಜೆಡಿಎಸ್ ಪಕ್ಷದ ಬೆಂಬಲ ನಮಗೆ ಮತ್ತಷ್ಟು ಬಲ ಬಂದಿದೆ. ಚುನಾವಣೆಯಲ್ಲಿ ಗೆಲ್ಲುವ ಆತ್ಮಸ್ಥೈರ್ಯ ಹೆಚ್ಚಿದೆ’ ಎಂದರು.</p>.<p>ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ‘ಜಾತ್ಯತೀತ ಮನಸ್ಸುಗಳು ಒಂದಾಗಿರುವುದರಿಂದ ಗಾಯತ್ರಿ ಶಾಂತೇಗೌಡರ ಆಯ್ಕೆಯಾಗುವುದು ಖಚಿತ’ ಎಂದರು.</p>.<p>ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್, ಸದಸ್ಯ ಮರುಗುದ್ದಿ ಮನು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ಮುಖಂಡರಾದ ಯರದಕೆರೆ ರಾಜಪ್ಪ, ಕಂಸಾಗರ ಶೇಖರಪ್ಪ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರೇಂ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>