<p>ಕಡೂರು: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಿಂದ ಬಿದ್ದು, ಯುವಕ ಮೃತಪಟ್ಟ ಘಟನೆ ಪಟ್ಟಣದ ಅಂಡರ್ಬ್ರಿಡ್ಜ್ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.</p>.<p>ಸುಭಾಷ್ನಗರದ ನೇಮಾನ್ (20) ಮೃತಪಟ್ಟವರು.</p>.<p>ಎಪಿಎಂಸಿ ಮಾರುಕಟ್ಟೆಗೆ ತರಕಾರಿ ತರಲು ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ನೇಮಾನ್, ರಸ್ತೆ ಮಧ್ಯೆ ಕೈಯಿಂದ ಬಿದ್ದ ಹಣವನ್ನು ಎತ್ತಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ವೇಳೆ ಬೈಕ್ ನಿಯಂತ್ರಣ ತಪ್ಪಿ, ಪಾದಚಾರಿಗೆ ಡಿಕ್ಕಿಯಾಗುವ ಜೊತೆಗೆ ಡಿವೈಡರ್ನಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.</p>.<p>ನೇಮಾನ್ಗೆ ತಲೆ ಹಾಗೂ ಸೊಂಟಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಘಟನೆಯಲ್ಲಿ ಪಾದಚಾರಿ ಶಶಿಧರ್ ಹಾಗೂ ಬೈಕ್ನ ಹಿಂಬದಿ ಸವಾರ ಅಫ್ರೀದಿಗೂ ಗಾಯಗಳಾಗಿವೆ.</p>.<p>ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-126-1353778490</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡೂರು: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಿಂದ ಬಿದ್ದು, ಯುವಕ ಮೃತಪಟ್ಟ ಘಟನೆ ಪಟ್ಟಣದ ಅಂಡರ್ಬ್ರಿಡ್ಜ್ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.</p>.<p>ಸುಭಾಷ್ನಗರದ ನೇಮಾನ್ (20) ಮೃತಪಟ್ಟವರು.</p>.<p>ಎಪಿಎಂಸಿ ಮಾರುಕಟ್ಟೆಗೆ ತರಕಾರಿ ತರಲು ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ನೇಮಾನ್, ರಸ್ತೆ ಮಧ್ಯೆ ಕೈಯಿಂದ ಬಿದ್ದ ಹಣವನ್ನು ಎತ್ತಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ವೇಳೆ ಬೈಕ್ ನಿಯಂತ್ರಣ ತಪ್ಪಿ, ಪಾದಚಾರಿಗೆ ಡಿಕ್ಕಿಯಾಗುವ ಜೊತೆಗೆ ಡಿವೈಡರ್ನಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.</p>.<p>ನೇಮಾನ್ಗೆ ತಲೆ ಹಾಗೂ ಸೊಂಟಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಘಟನೆಯಲ್ಲಿ ಪಾದಚಾರಿ ಶಶಿಧರ್ ಹಾಗೂ ಬೈಕ್ನ ಹಿಂಬದಿ ಸವಾರ ಅಫ್ರೀದಿಗೂ ಗಾಯಗಳಾಗಿವೆ.</p>.<p>ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-126-1353778490</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>