<p><strong>ಕಡೂರು</strong>: ‘ಬಕ್ರೀದ್ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಗೋವುಗಳಸಾಗಾಣಿಕೆ ಮತ್ತು ಗೋಹತ್ಯೆಯನ್ನು ತಡೆಯಬೇಕು’ ಎಂದು ಒತ್ತಾಯಿಸಿ, ಬಜರಂಗದಳ ಕಡೂರು ತಾಲ್ಲೂಕು ಸಂಯೋಜಕ ಯೋಗೀಶ್ ಪೂಜಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಗೋ ಸಂಪತ್ತನ್ನು ಉಳಿಸುವುದು ಪ್ರತಿ ನಾಗರಿಕನ ಮತ್ತು ಕಾನೂನು ಪಾಲಕರ ಜವಾಬ್ದಾರಿ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.</p>.<p>ಕಡೂರು-ಬೀರೂರು ಪಟ್ಟಣ ಹಾಗೂ ತಾಲ್ಲೂಕು ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ದ್ರವ್ಯಗಳ (ಗಾಂಜಾ) ಜಾಲದ ವಿರುದ್ಧವೂ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕಡೂರು ವೃತ್ತ ನಿರೀಕ್ಷಕರ ಕಚೇರಿಗೂ ಮನವಿ ಪತ್ರ ಸಲ್ಲಿಸಲಾಯಿತು.</p>.<p>ದರ್ಶನ್, ಶ್ರೀಕಾಂತ್, ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-126-1440408698</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ‘ಬಕ್ರೀದ್ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಗೋವುಗಳಸಾಗಾಣಿಕೆ ಮತ್ತು ಗೋಹತ್ಯೆಯನ್ನು ತಡೆಯಬೇಕು’ ಎಂದು ಒತ್ತಾಯಿಸಿ, ಬಜರಂಗದಳ ಕಡೂರು ತಾಲ್ಲೂಕು ಸಂಯೋಜಕ ಯೋಗೀಶ್ ಪೂಜಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಗೋ ಸಂಪತ್ತನ್ನು ಉಳಿಸುವುದು ಪ್ರತಿ ನಾಗರಿಕನ ಮತ್ತು ಕಾನೂನು ಪಾಲಕರ ಜವಾಬ್ದಾರಿ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.</p>.<p>ಕಡೂರು-ಬೀರೂರು ಪಟ್ಟಣ ಹಾಗೂ ತಾಲ್ಲೂಕು ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ದ್ರವ್ಯಗಳ (ಗಾಂಜಾ) ಜಾಲದ ವಿರುದ್ಧವೂ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕಡೂರು ವೃತ್ತ ನಿರೀಕ್ಷಕರ ಕಚೇರಿಗೂ ಮನವಿ ಪತ್ರ ಸಲ್ಲಿಸಲಾಯಿತು.</p>.<p>ದರ್ಶನ್, ಶ್ರೀಕಾಂತ್, ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-126-1440408698</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>