<p><strong>ಕಡೂರು</strong>: ‘ಬಾಬಾಸಾಹೇಬ ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮುತ್ಸದ್ಧಿ’ ಎಂದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.</p>.<p>ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಬುಧವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಕರ್ನಾಟಕ ಭೀಮ ಸೇನೆ ಜಿಲ್ಲಾಧ್ಯಕ್ಷ ಕುಂಕಾನಾಡು ಮಂಜುನಾಥ್ ಮಾತನಾಡಿ, ‘ದೇಶದ ಭವಿಷ್ಯವನ್ನೇ ಬದಲಿಸುವ ಸಂವಿಧಾನ ರಚಿಸಿ, ದೇಶವಾಸಿಗಳಿಗೆ ಸಮಾನ ಹಕ್ಕು ನೀಡಿದ ಮಹಾನ್ ಚೇತನ. ಹಿಂದುಳಿದ ವರ್ಗ, ಶೋಷಿತರಿಗೆ ಧ್ವನಿಯಾಗಿ ನಿಂತವರು ಅಂಬೇಡ್ಕರ್’ ಎಂದರು.</p>.<p>ಡಿಎಸ್ಎಸ್ ಮುಖಂಡ ಅಂಬೇಡ್ಕರ್ ನಗರ ಶಂಕರ್ ಮಾತನಾಡಿ, ‘ಬಾಬಾಸಾಹೇಬರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಿದರೆ, ಅದೇ ನಾವು ಅವರಿಗೆ ಸಲ್ಲಿಸುವ ಗೌರವ’ ಎಂದರು.</p>.<p>ಡಿಎಸ್ಎಸ್ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಮಾತನಾಡಿದರು.</p>.<p>ಮುಖಂಡರಾದ ಪತ್ರಕರ್ತ ಟಿ.ಲಕ್ಷ್ಮಣ್, ಮಾದಿಗ ಮಹಾಸಭಾ ತಾಲ್ಲೂಕು ಅಧ್ಯಕ್ಷ ಪದ್ಮನಾಭಯ್ಯ, ಬೀರೂರುಜಗದೀಶ್, ಮೇಲ್ನಳ್ಳಿ ಪ್ರಭು, ತಿಮ್ಮಯ್ಯ, ಪುರಸಭಾ ಸದಸ್ಯ ಸಯ್ಯದ್ಯಾಸೀನ್, ಶ್ರೀನಿವಾಸ್ಬಿದರಿಕೆರೆ, ಪಟ್ಟಣಗೆರೆ ನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ‘ಬಾಬಾಸಾಹೇಬ ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮುತ್ಸದ್ಧಿ’ ಎಂದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.</p>.<p>ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಬುಧವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಕರ್ನಾಟಕ ಭೀಮ ಸೇನೆ ಜಿಲ್ಲಾಧ್ಯಕ್ಷ ಕುಂಕಾನಾಡು ಮಂಜುನಾಥ್ ಮಾತನಾಡಿ, ‘ದೇಶದ ಭವಿಷ್ಯವನ್ನೇ ಬದಲಿಸುವ ಸಂವಿಧಾನ ರಚಿಸಿ, ದೇಶವಾಸಿಗಳಿಗೆ ಸಮಾನ ಹಕ್ಕು ನೀಡಿದ ಮಹಾನ್ ಚೇತನ. ಹಿಂದುಳಿದ ವರ್ಗ, ಶೋಷಿತರಿಗೆ ಧ್ವನಿಯಾಗಿ ನಿಂತವರು ಅಂಬೇಡ್ಕರ್’ ಎಂದರು.</p>.<p>ಡಿಎಸ್ಎಸ್ ಮುಖಂಡ ಅಂಬೇಡ್ಕರ್ ನಗರ ಶಂಕರ್ ಮಾತನಾಡಿ, ‘ಬಾಬಾಸಾಹೇಬರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಿದರೆ, ಅದೇ ನಾವು ಅವರಿಗೆ ಸಲ್ಲಿಸುವ ಗೌರವ’ ಎಂದರು.</p>.<p>ಡಿಎಸ್ಎಸ್ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಮಾತನಾಡಿದರು.</p>.<p>ಮುಖಂಡರಾದ ಪತ್ರಕರ್ತ ಟಿ.ಲಕ್ಷ್ಮಣ್, ಮಾದಿಗ ಮಹಾಸಭಾ ತಾಲ್ಲೂಕು ಅಧ್ಯಕ್ಷ ಪದ್ಮನಾಭಯ್ಯ, ಬೀರೂರುಜಗದೀಶ್, ಮೇಲ್ನಳ್ಳಿ ಪ್ರಭು, ತಿಮ್ಮಯ್ಯ, ಪುರಸಭಾ ಸದಸ್ಯ ಸಯ್ಯದ್ಯಾಸೀನ್, ಶ್ರೀನಿವಾಸ್ಬಿದರಿಕೆರೆ, ಪಟ್ಟಣಗೆರೆ ನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>