<p><strong>ಕಡೂರು</strong>: ತಾಲ್ಲೂಕಿನಲ್ಲಿ ಯುವತಿಯೊಬ್ಬಳು ತನಗಿಂತ ಕಿರಿಯ ಬಾಲಕನನ್ನು ವರಿಸಿದ್ದು, ಈ ಸಂಬಂಧ ಯುವತಿ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಾಗಿದೆ.</p>.<p>20 ವರ್ಷದ ಯುವತಿಗೆ, ಫೇಸ್ಬುಕ್ ಮೂಲಕ 17 ವರ್ಷದ ಹುಡುಗನ ಪರಿಚಯವಾಗಿದೆ. ಈ ಪರಿಚಯ ಪ್ರೇಮಕ್ಕೆ ತಿರುಗಿದ್ದು, ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಆದರೆ, ಹುಡುಗ, ಯುವತಿಗಿಂತ ಮೂರು ವರ್ಷ ಚಿಕ್ಕವನೆಂಬ ವಿಷಯ ತಿಳಿದಿದ್ದರೂ, ಎರಡೂ ಮನೆಯವರು ಪ್ರೇಮವಿವಾಹಕ್ಕೆ ಸಮ್ಮತಿಸಿದ್ದರು. ಹುಡುಗನ ಮನೆಯಲ್ಲೆ ಎರಡೂ ಕಡೆಯ ಹಿರಿಯರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲೇ ಜೂನ್ 16ರಂದು ಮದುವೆಯೂ ನಡೆದಿದೆ.</p>.<p>ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಜೂನ್ 23ರಂದು ಮಾಹಿತಿ ದೊರೆತಿತ್ತು. ಪೊಲೀಸರೊಡನೆ ಅಂಗನವಾಡಿ ಮೇಲ್ವಿಚಾರಕಿ ಜಾಕೀರ್ ತಾಜ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೇಘರಾಜ್ ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸ್ಥಳಕ್ಕೆ ತೆರಳಿ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ.</p>.<p>ಯುವತಿಯನ್ನು ಜಿಲ್ಲೆಯ ಸ್ವಾಧಾರ ಕೇಂದ್ರಕ್ಕೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ತಾಲ್ಲೂಕಿನಲ್ಲಿ ಯುವತಿಯೊಬ್ಬಳು ತನಗಿಂತ ಕಿರಿಯ ಬಾಲಕನನ್ನು ವರಿಸಿದ್ದು, ಈ ಸಂಬಂಧ ಯುವತಿ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಾಗಿದೆ.</p>.<p>20 ವರ್ಷದ ಯುವತಿಗೆ, ಫೇಸ್ಬುಕ್ ಮೂಲಕ 17 ವರ್ಷದ ಹುಡುಗನ ಪರಿಚಯವಾಗಿದೆ. ಈ ಪರಿಚಯ ಪ್ರೇಮಕ್ಕೆ ತಿರುಗಿದ್ದು, ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಆದರೆ, ಹುಡುಗ, ಯುವತಿಗಿಂತ ಮೂರು ವರ್ಷ ಚಿಕ್ಕವನೆಂಬ ವಿಷಯ ತಿಳಿದಿದ್ದರೂ, ಎರಡೂ ಮನೆಯವರು ಪ್ರೇಮವಿವಾಹಕ್ಕೆ ಸಮ್ಮತಿಸಿದ್ದರು. ಹುಡುಗನ ಮನೆಯಲ್ಲೆ ಎರಡೂ ಕಡೆಯ ಹಿರಿಯರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲೇ ಜೂನ್ 16ರಂದು ಮದುವೆಯೂ ನಡೆದಿದೆ.</p>.<p>ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಜೂನ್ 23ರಂದು ಮಾಹಿತಿ ದೊರೆತಿತ್ತು. ಪೊಲೀಸರೊಡನೆ ಅಂಗನವಾಡಿ ಮೇಲ್ವಿಚಾರಕಿ ಜಾಕೀರ್ ತಾಜ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೇಘರಾಜ್ ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸ್ಥಳಕ್ಕೆ ತೆರಳಿ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ.</p>.<p>ಯುವತಿಯನ್ನು ಜಿಲ್ಲೆಯ ಸ್ವಾಧಾರ ಕೇಂದ್ರಕ್ಕೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>