<p><strong>ಕಡೂರು (ಚಿಕ್ಕಮಗಳೂರು):</strong> ಮದ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡಿದ್ದ ಚಾಲಕನಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ಸಮುದಾಯ ಸೇವೆಯ ಶಿಕ್ಷೆ ವಿಧಿಸಿದೆ.</p>.<p>ಪಟ್ಟಣದಲ್ಲಿ ಮಾರ್ಚ್ 11ರಂದು ಮದ್ಯಪಾನ ಮಾಡಿ ಲಾರಿ ಚಾಲನೆ ಮಾಡುತ್ತಿದ್ದ ತಾಲ್ಲೂಕಿನ ಬಿಸಲೇಹಳ್ಳಿ ಗ್ರಾಮದ ರಂಜಿತ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀಶೆ ಅಮ್ರೀನ್ ಸುಲ್ತಾನಾ ಅವರು, ರಂಜಿತ್ ಕುಮಾರ್ ತಪ್ಪು ಒಪ್ಪಿಕೊಂಡಿದ್ದರಿಂದ ಈ ಶಿಕ್ಷೆ ವಿಧಿಸಿದರು.</p>.<p>ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಪಟ್ಟಣದ ಮಲ್ಲೇಶ್ವರ–ಮರವಂಜಿ ವೃತ್ತದಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಫಲಕ ಹಿಡಿದು ನಿಲ್ಲುವ ಸಜೆ ವಿಧಿಸಿದರು. ಮೇಲ್ವಿಚಾರಣೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆಯೂ ನಿರ್ದೇಶಿಸಿದ್ದರು. </p>.<p>ಕೋರ್ಟ್ ಆದೇಶದಂತೆ, ಪೊಲೀಸ್ ಸಿಬ್ಬಂದಿ ಮಹೇಂದ್ರ ಕುಮಾರ್ ಮೇಲ್ವಿಚಾರಣೆಯಲ್ಲಿ ರಂಜಿತ್ ಕುಮಾರ್ ಅವರನ್ನು ಮಲ್ಲೇಶ್ವರ ವೃತ್ತದಲ್ಲಿ ನಿಲ್ಲಿಸಲಾಯಿತು. ಈ ವೇಳೆ ಪಿಎಸ್ಐ ಸಜಿತ್ಕುಮಾರ್ ಸಾರ್ವಜನಿಕರಿಗೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಸಿಬ್ಬಂದಿ ರೇಣುಕಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು (ಚಿಕ್ಕಮಗಳೂರು):</strong> ಮದ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡಿದ್ದ ಚಾಲಕನಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ಸಮುದಾಯ ಸೇವೆಯ ಶಿಕ್ಷೆ ವಿಧಿಸಿದೆ.</p>.<p>ಪಟ್ಟಣದಲ್ಲಿ ಮಾರ್ಚ್ 11ರಂದು ಮದ್ಯಪಾನ ಮಾಡಿ ಲಾರಿ ಚಾಲನೆ ಮಾಡುತ್ತಿದ್ದ ತಾಲ್ಲೂಕಿನ ಬಿಸಲೇಹಳ್ಳಿ ಗ್ರಾಮದ ರಂಜಿತ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀಶೆ ಅಮ್ರೀನ್ ಸುಲ್ತಾನಾ ಅವರು, ರಂಜಿತ್ ಕುಮಾರ್ ತಪ್ಪು ಒಪ್ಪಿಕೊಂಡಿದ್ದರಿಂದ ಈ ಶಿಕ್ಷೆ ವಿಧಿಸಿದರು.</p>.<p>ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಪಟ್ಟಣದ ಮಲ್ಲೇಶ್ವರ–ಮರವಂಜಿ ವೃತ್ತದಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಫಲಕ ಹಿಡಿದು ನಿಲ್ಲುವ ಸಜೆ ವಿಧಿಸಿದರು. ಮೇಲ್ವಿಚಾರಣೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆಯೂ ನಿರ್ದೇಶಿಸಿದ್ದರು. </p>.<p>ಕೋರ್ಟ್ ಆದೇಶದಂತೆ, ಪೊಲೀಸ್ ಸಿಬ್ಬಂದಿ ಮಹೇಂದ್ರ ಕುಮಾರ್ ಮೇಲ್ವಿಚಾರಣೆಯಲ್ಲಿ ರಂಜಿತ್ ಕುಮಾರ್ ಅವರನ್ನು ಮಲ್ಲೇಶ್ವರ ವೃತ್ತದಲ್ಲಿ ನಿಲ್ಲಿಸಲಾಯಿತು. ಈ ವೇಳೆ ಪಿಎಸ್ಐ ಸಜಿತ್ಕುಮಾರ್ ಸಾರ್ವಜನಿಕರಿಗೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಸಿಬ್ಬಂದಿ ರೇಣುಕಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>