<p><strong>ಕಡೂರು:</strong> ಶೋಷಿತ ಸಮುದಾಯಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಪಡೆಯುವ ಮೂಲಕ ಜೀವನವನ್ನು ಬದಲಿಸಿಕೊಳ್ಳಿ ಎಂದು ಕೊರಚ-ಕೊರಮ ಜನಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಿಂಗಟಗೆರೆ ಪೊಲೀಸ್ ಠಾಣೆಗೆ ಪಿಎಸ್ಐ ಆಗಿ ನೇಮಕಗೊಂಡ ತಾಲ್ಲೂಕಿನ ಆರ್.ಜಿ.ಕೊಪ್ಪಲು ಗ್ರಾಮದ ಹೊನ್ನಪ್ಪ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಕಡಿಮೆ ಜನಸಂಖ್ಯೆ ಇರುವ ಕೊರಚ-ಕೊರಮ ಸಮಾಜದಲ್ಲಿ ಹುಟ್ಟಿ, ಕಠಿಣ ಪರಿಶ್ರಮದ ಮೂಲಕ ವಿದ್ಯಾಭ್ಯಾಸ ಪೂರೈಸಿ ಬಳಿಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸಿರುವ ಹೊನ್ನಪ್ಪ ಅವರು, ನಮ್ಮ ಸಮಾಜದ ಯುವ ಜನರಿಗೆ ಮಾದರಿಯಾಗಿದ್ದಾರೆ. ಅವರ ಸೇವೆ ಮತ್ತಷ್ಟು ಉತ್ತಮಗೊಂಡು ಇಲಾಖೆಯ ಗೌರವವನ್ನು ಹೆಚ್ಚಿಸುವಂತಾಗಲಿ ಎಂದರು.</p>.<p>ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪಿಎಸ್ಐ ಹೊನ್ನಪ್ಪ, ಸಮಾಜದ ಬಂಧುಗಳ ಪ್ರೀತಿ, ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಸಮಾಜದ ಪ್ರಗತಿಗೆ ತಮ್ಮ ಇತಿಮಿತಿಯ ಸಹಕಾರ ನಿರಂತರವಾಗಿರಲಿದೆ. ನಮ್ಮ ಮಕ್ಕಳು ಮೊದಲು ಶೈಕ್ಷಣಿಕವಾಗಿ ಸಬಲರಾಗಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ ಎಂದರು.</p>.<p>ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಅಣ್ಣಯ್ಯ, ಶ್ರೀನಿವಾಸ್, ಕೃಷ್ಣಕೀರ್ತಿ, ಮಲ್ಲಿದೇವಿಹಳ್ಳಿ ಶ್ರೀನಿವಾಸ್, ಪ್ರವೀಣ್, ರಮೇಶ್, ಶಶಿಕುಮಾರ್, ಸುಜಾತಾ ರಂಗಪ್ಪ, ಕೃಷ್ಣಮೂರ್ತಿ, ಶಿಕ್ಷಕ ಶ್ರೀನಿವಾಸ್, ಗುರುಸ್ವಾಮಿ, ಸಂಘದ ಪ್ರಧಾನ ಕಾರ್ಯದರ್ಶಿ ಹೋರಿತಿಮ್ಮನಹಳ್ಳಿ ಶ್ರೀನಿವಾಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-126-866750705</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ಶೋಷಿತ ಸಮುದಾಯಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಪಡೆಯುವ ಮೂಲಕ ಜೀವನವನ್ನು ಬದಲಿಸಿಕೊಳ್ಳಿ ಎಂದು ಕೊರಚ-ಕೊರಮ ಜನಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಿಂಗಟಗೆರೆ ಪೊಲೀಸ್ ಠಾಣೆಗೆ ಪಿಎಸ್ಐ ಆಗಿ ನೇಮಕಗೊಂಡ ತಾಲ್ಲೂಕಿನ ಆರ್.ಜಿ.ಕೊಪ್ಪಲು ಗ್ರಾಮದ ಹೊನ್ನಪ್ಪ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಕಡಿಮೆ ಜನಸಂಖ್ಯೆ ಇರುವ ಕೊರಚ-ಕೊರಮ ಸಮಾಜದಲ್ಲಿ ಹುಟ್ಟಿ, ಕಠಿಣ ಪರಿಶ್ರಮದ ಮೂಲಕ ವಿದ್ಯಾಭ್ಯಾಸ ಪೂರೈಸಿ ಬಳಿಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸಿರುವ ಹೊನ್ನಪ್ಪ ಅವರು, ನಮ್ಮ ಸಮಾಜದ ಯುವ ಜನರಿಗೆ ಮಾದರಿಯಾಗಿದ್ದಾರೆ. ಅವರ ಸೇವೆ ಮತ್ತಷ್ಟು ಉತ್ತಮಗೊಂಡು ಇಲಾಖೆಯ ಗೌರವವನ್ನು ಹೆಚ್ಚಿಸುವಂತಾಗಲಿ ಎಂದರು.</p>.<p>ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪಿಎಸ್ಐ ಹೊನ್ನಪ್ಪ, ಸಮಾಜದ ಬಂಧುಗಳ ಪ್ರೀತಿ, ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಸಮಾಜದ ಪ್ರಗತಿಗೆ ತಮ್ಮ ಇತಿಮಿತಿಯ ಸಹಕಾರ ನಿರಂತರವಾಗಿರಲಿದೆ. ನಮ್ಮ ಮಕ್ಕಳು ಮೊದಲು ಶೈಕ್ಷಣಿಕವಾಗಿ ಸಬಲರಾಗಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ ಎಂದರು.</p>.<p>ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಅಣ್ಣಯ್ಯ, ಶ್ರೀನಿವಾಸ್, ಕೃಷ್ಣಕೀರ್ತಿ, ಮಲ್ಲಿದೇವಿಹಳ್ಳಿ ಶ್ರೀನಿವಾಸ್, ಪ್ರವೀಣ್, ರಮೇಶ್, ಶಶಿಕುಮಾರ್, ಸುಜಾತಾ ರಂಗಪ್ಪ, ಕೃಷ್ಣಮೂರ್ತಿ, ಶಿಕ್ಷಕ ಶ್ರೀನಿವಾಸ್, ಗುರುಸ್ವಾಮಿ, ಸಂಘದ ಪ್ರಧಾನ ಕಾರ್ಯದರ್ಶಿ ಹೋರಿತಿಮ್ಮನಹಳ್ಳಿ ಶ್ರೀನಿವಾಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-126-866750705</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>