<p><strong>ಕಡೂರು (ಚಿಕ್ಕಮಗಳೂರು):</strong> ತಂದೆಯೇ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ತಾಯಿ ಆರು ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ಪ್ರಥಮ ಪಿಯುನಲ್ಲೇ ಬಾಲಕಿ ಓದು ನಿಲ್ಲಿಸಿದ್ದಾಳೆ. ತಂದೆ ಮತ್ತು ಭರತ್ ಶೆಟ್ಟಿ ಎಂಬ ಮತ್ತೊಬ್ಬ ವ್ಯಕ್ತಿ ಸೇರಿ ಮಂಗಳೂರಿಗೆ ಡಿ.21ರಂದು ಕರೆದೊಯ್ದಿದ್ದಾರೆ. ಅಲ್ಲಿ ಎರಡು ದಿನಗಳಲ್ಲಿ ಹಲವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿಯೂ ಆಕೆಯ ತಂದೆ ಕೂಡ ರಕ್ಷಣೆಗೆ ಬಂದಿಲ್ಲ.</p>.<p>ಮನೆಗೆ ಕಳುಹಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಾಲಕಿ ಹೇಳಿದ ಬಳಿಕ ವಾಪಸು ಕಳುಹಿಸಿದ್ದಾನೆ. ಮನೆಗೆ ಬಂದ ಬಾಲಕಿ ಸಂಬಂಧಿಕರಿಗೆ ವಿಷಯ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಭರತ್ ಶೆಟ್ಟಿ ಮತ್ತು ಇತರ ಮೂವರನ್ನು ಬಂಧಿಸಲಾಗಿದ್ದು, ಇನ್ನೂ ಹಲವರನ್ನು ಬಂಧಿಸಬೇಕಿದೆ. ಬಾಲಕಿಯ ಹೇಳಿಕೆ ಆಧರಿಸಿ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>
<p><strong>ಕಡೂರು (ಚಿಕ್ಕಮಗಳೂರು):</strong> ತಂದೆಯೇ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ತಾಯಿ ಆರು ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ಪ್ರಥಮ ಪಿಯುನಲ್ಲೇ ಬಾಲಕಿ ಓದು ನಿಲ್ಲಿಸಿದ್ದಾಳೆ. ತಂದೆ ಮತ್ತು ಭರತ್ ಶೆಟ್ಟಿ ಎಂಬ ಮತ್ತೊಬ್ಬ ವ್ಯಕ್ತಿ ಸೇರಿ ಮಂಗಳೂರಿಗೆ ಡಿ.21ರಂದು ಕರೆದೊಯ್ದಿದ್ದಾರೆ. ಅಲ್ಲಿ ಎರಡು ದಿನಗಳಲ್ಲಿ ಹಲವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿಯೂ ಆಕೆಯ ತಂದೆ ಕೂಡ ರಕ್ಷಣೆಗೆ ಬಂದಿಲ್ಲ.</p>.<p>ಮನೆಗೆ ಕಳುಹಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಾಲಕಿ ಹೇಳಿದ ಬಳಿಕ ವಾಪಸು ಕಳುಹಿಸಿದ್ದಾನೆ. ಮನೆಗೆ ಬಂದ ಬಾಲಕಿ ಸಂಬಂಧಿಕರಿಗೆ ವಿಷಯ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಭರತ್ ಶೆಟ್ಟಿ ಮತ್ತು ಇತರ ಮೂವರನ್ನು ಬಂಧಿಸಲಾಗಿದ್ದು, ಇನ್ನೂ ಹಲವರನ್ನು ಬಂಧಿಸಬೇಕಿದೆ. ಬಾಲಕಿಯ ಹೇಳಿಕೆ ಆಧರಿಸಿ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>