<p><strong>ಕಡೂರು: </strong>ಬೆಂಗಳೂರು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಕಡೂರು ಸಾರ್ವಜನಿಕ ಆಸ್ಪತ್ರೆಗೆ 10 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.</p>.<p>ಶಾಸಕರ ಕಚೇರಿಯಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ಅವರಿಗೆ ಸಾಂದ್ರಕಗಳನ್ನು ಶಾಸಕ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಹಸ್ತಾಂತರಿಸಿದರು.</p>.<p>‘ಕೋವಿಡ್ ಎರಡನೇ ಅಲೆ ಜನಜೀವನವನ್ನು ಅತ್ಯಂತ ಸಂಕಷ್ಟಕ್ಕೆ ಸಿಲುಕಿಸಿದೆ. ಜನರಿಗೆ ಬಹುಮುಖ್ಯವಾಗಿ ಚಿಕಿತ್ಸೆ ಸಕಾಲದಲ್ಲಿ ದೊರೆಯಬೇಕು. ಅದಕ್ಕೆ ಪೂರಕವಾಗಿ ಆಸ್ಪತ್ರೆಗಳಲ್ಲಿ ಪರಿಕರಗಳು ಇರಬೇಕು. ಇದು ಸರ್ಕಾರದ ಆಶಯವೂ ಹೌದು. ಆ ನಿಟ್ಟಿನಲ್ಲಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಜತೆಗೆ ಅನೇಕ ದಾನಿಗಳು ಕೈಜೋಡಿಸಿರುವುದು ಸ್ವಾಗತಾರ್ಹ’ ಎಂದರು.</p>.<p>‘ಆರ್.ಆರ್.ನಗರದ ಶಾಸಕ ಮುನಿರತ್ನ ಅವರು ಬಹು ಅಭಿಮಾನ ದಿಂದ ಕಡೂರು ಆಸ್ಪತ್ರೆಗೆ ಮಾನವೀಯ ನೆಲೆಯಲ್ಲಿ ಹತ್ತು ಆಮ್ಲಜನಕ ಸಾಂದ್ರಕಗಳನ್ನು ವೈಯಕ್ತಿಕ ಕೊಡುಗೆಯಾಗಿ ನೀಡಿ ಹೃದಯವಂತಿಕೆ ಮೆರೆದಿದ್ದಾರೆ. ಕ್ಷೇತ್ರದ ಶಾಸಕನಾಗಿ ಜನತೆಯ ಪರವಾಗಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಹೇಳಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಕುಮಾರ್, ತಹಶೀಲ್ದಾರ್ ಜೆ.ಉಮೇಶ್, ಇನ್ಸ್ಪೆಕ್ಟರ್ ಮಂಜುನಾಥ್, ಪಿಎಸ್ಐ ರಮ್ಯಾ, ಇಒ ಡಾ.ದೇವರಾಜ ನಾಯ್ಕ, ಮುಖಂಡ ರಾದ ಮುರುಳಿ ಕೊಠಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು: </strong>ಬೆಂಗಳೂರು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ಕಡೂರು ಸಾರ್ವಜನಿಕ ಆಸ್ಪತ್ರೆಗೆ 10 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.</p>.<p>ಶಾಸಕರ ಕಚೇರಿಯಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ಅವರಿಗೆ ಸಾಂದ್ರಕಗಳನ್ನು ಶಾಸಕ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಹಸ್ತಾಂತರಿಸಿದರು.</p>.<p>‘ಕೋವಿಡ್ ಎರಡನೇ ಅಲೆ ಜನಜೀವನವನ್ನು ಅತ್ಯಂತ ಸಂಕಷ್ಟಕ್ಕೆ ಸಿಲುಕಿಸಿದೆ. ಜನರಿಗೆ ಬಹುಮುಖ್ಯವಾಗಿ ಚಿಕಿತ್ಸೆ ಸಕಾಲದಲ್ಲಿ ದೊರೆಯಬೇಕು. ಅದಕ್ಕೆ ಪೂರಕವಾಗಿ ಆಸ್ಪತ್ರೆಗಳಲ್ಲಿ ಪರಿಕರಗಳು ಇರಬೇಕು. ಇದು ಸರ್ಕಾರದ ಆಶಯವೂ ಹೌದು. ಆ ನಿಟ್ಟಿನಲ್ಲಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಜತೆಗೆ ಅನೇಕ ದಾನಿಗಳು ಕೈಜೋಡಿಸಿರುವುದು ಸ್ವಾಗತಾರ್ಹ’ ಎಂದರು.</p>.<p>‘ಆರ್.ಆರ್.ನಗರದ ಶಾಸಕ ಮುನಿರತ್ನ ಅವರು ಬಹು ಅಭಿಮಾನ ದಿಂದ ಕಡೂರು ಆಸ್ಪತ್ರೆಗೆ ಮಾನವೀಯ ನೆಲೆಯಲ್ಲಿ ಹತ್ತು ಆಮ್ಲಜನಕ ಸಾಂದ್ರಕಗಳನ್ನು ವೈಯಕ್ತಿಕ ಕೊಡುಗೆಯಾಗಿ ನೀಡಿ ಹೃದಯವಂತಿಕೆ ಮೆರೆದಿದ್ದಾರೆ. ಕ್ಷೇತ್ರದ ಶಾಸಕನಾಗಿ ಜನತೆಯ ಪರವಾಗಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಹೇಳಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಕುಮಾರ್, ತಹಶೀಲ್ದಾರ್ ಜೆ.ಉಮೇಶ್, ಇನ್ಸ್ಪೆಕ್ಟರ್ ಮಂಜುನಾಥ್, ಪಿಎಸ್ಐ ರಮ್ಯಾ, ಇಒ ಡಾ.ದೇವರಾಜ ನಾಯ್ಕ, ಮುಖಂಡ ರಾದ ಮುರುಳಿ ಕೊಠಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>