<p><strong>ಕಡೂರು:</strong> ‘ಯುವಜನತೆಯನ್ನು ಸಾಹಿತ್ಯ ಮತ್ತು ಜಾನಪದ ಕ್ಷೇತ್ರಗಳತ್ತ ಆಸಕ್ತಿ ತೋರಿಸಲು ಪ್ರೇರೇಪಿಸುವುದು ಸಮ್ಮೇಳನಗಳ ಆಶಯ’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ವೈ.ಎಸ್.ರವಿಪ್ರಕಾಶ್ ಅಭಿಪ್ರಾಯಪಟ್ಟರು.</p>.<p>ಯಗಟಿಪುರದಲ್ಲಿ ಶನಿವಾರ ನಡೆದ ಪ್ರಥಮ ಜಾನಪದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಮ್ಮೇಳನಗಳು ನಮ್ಮ ನಡುವಿನ ಜ್ವಲಂತ ಸಮಸ್ಯೆಗಳನ್ನು ಅನಾವರಣಗೊಳಿಸುವ ಮತ್ತು ಅದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲು ಸೂಕ್ತ ವೇದಿಕೆಯಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಂತೆ ಜಾನಪದ ಪರಿಷತ್ತು ಆ ಕ್ಷೇತ್ರದಲ್ಲಿನ ಸಮಸ್ಯೆಗಳು ಮತ್ತು ನಶಿಸಿಹೋಗುತ್ತಿರುವ ನಮ್ಮ ಸಂಸ್ಕೃತಿಯ ಭಾಗವೇ ಆದ ಜಾನಪದ ಕಲೆಗಳನ್ನುಳಿಸಲು ಮುಂದಾಗಬೇಕು. ಅದಕ್ಕೆ ಪೂರಕವಾಗಿ ನಡೆದ ಈ ಸಮ್ಮೇಳನಕ್ಕೆ ಜನರ ಪ್ರತಿಕ್ರಿಯೆ ಆಶಾದಾಯಕವಾಗಿದೆ. ಪರಿಷತ್ತಿನ ಭವಿಷ್ಯದ ಕಾರ್ಯಕ್ರಮಗಳಿಗೆ ಸ್ಫೂರ್ತಿಯಾಗಿದೆ’ ಎಂದರು.</p>.<p>ಚಿಂತಕ ಯರದಕೆರೆ ಎಂ.ರಾಜಪ್ಪ ಮಾತನಾಡಿ, ‘ಜಾತೀಯತೆಯ ಸೋಂಕಿಲ್ಲದೆ ಕಲೆಗಳ ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಬೇಕು. ಗ್ರಾಮೀಣ ಭಾಗದಲ್ಲಿ ಸುಪ್ತವಾಗಿರುವ ಜಾನಪದ ಕಲೆಗಳು ಪ್ರಕಾಶನಗೊಂಡಾಗ ನಮ್ಮ ಸಂಸ್ಕೃತಿಯ ಅರಿವು ಮುಂದಿನ ಪೀಳಿಗೆಗೆ ದೊರಕಲಿದೆ’ ಎಂದರು.</p>.<p>ಸಮ್ಮೇಳನಾಧ್ಯಕ್ಷ ಚಟ್ನಳ್ಳಿ ಮಹೇಶ್ ಅವರನ್ನು ಗ್ರಾಮಸ್ಥರು ಮತ್ತು ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ್ವರಾಚಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ‘ಯುವಜನತೆಯನ್ನು ಸಾಹಿತ್ಯ ಮತ್ತು ಜಾನಪದ ಕ್ಷೇತ್ರಗಳತ್ತ ಆಸಕ್ತಿ ತೋರಿಸಲು ಪ್ರೇರೇಪಿಸುವುದು ಸಮ್ಮೇಳನಗಳ ಆಶಯ’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ವೈ.ಎಸ್.ರವಿಪ್ರಕಾಶ್ ಅಭಿಪ್ರಾಯಪಟ್ಟರು.</p>.<p>ಯಗಟಿಪುರದಲ್ಲಿ ಶನಿವಾರ ನಡೆದ ಪ್ರಥಮ ಜಾನಪದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಮ್ಮೇಳನಗಳು ನಮ್ಮ ನಡುವಿನ ಜ್ವಲಂತ ಸಮಸ್ಯೆಗಳನ್ನು ಅನಾವರಣಗೊಳಿಸುವ ಮತ್ತು ಅದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲು ಸೂಕ್ತ ವೇದಿಕೆಯಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಂತೆ ಜಾನಪದ ಪರಿಷತ್ತು ಆ ಕ್ಷೇತ್ರದಲ್ಲಿನ ಸಮಸ್ಯೆಗಳು ಮತ್ತು ನಶಿಸಿಹೋಗುತ್ತಿರುವ ನಮ್ಮ ಸಂಸ್ಕೃತಿಯ ಭಾಗವೇ ಆದ ಜಾನಪದ ಕಲೆಗಳನ್ನುಳಿಸಲು ಮುಂದಾಗಬೇಕು. ಅದಕ್ಕೆ ಪೂರಕವಾಗಿ ನಡೆದ ಈ ಸಮ್ಮೇಳನಕ್ಕೆ ಜನರ ಪ್ರತಿಕ್ರಿಯೆ ಆಶಾದಾಯಕವಾಗಿದೆ. ಪರಿಷತ್ತಿನ ಭವಿಷ್ಯದ ಕಾರ್ಯಕ್ರಮಗಳಿಗೆ ಸ್ಫೂರ್ತಿಯಾಗಿದೆ’ ಎಂದರು.</p>.<p>ಚಿಂತಕ ಯರದಕೆರೆ ಎಂ.ರಾಜಪ್ಪ ಮಾತನಾಡಿ, ‘ಜಾತೀಯತೆಯ ಸೋಂಕಿಲ್ಲದೆ ಕಲೆಗಳ ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಬೇಕು. ಗ್ರಾಮೀಣ ಭಾಗದಲ್ಲಿ ಸುಪ್ತವಾಗಿರುವ ಜಾನಪದ ಕಲೆಗಳು ಪ್ರಕಾಶನಗೊಂಡಾಗ ನಮ್ಮ ಸಂಸ್ಕೃತಿಯ ಅರಿವು ಮುಂದಿನ ಪೀಳಿಗೆಗೆ ದೊರಕಲಿದೆ’ ಎಂದರು.</p>.<p>ಸಮ್ಮೇಳನಾಧ್ಯಕ್ಷ ಚಟ್ನಳ್ಳಿ ಮಹೇಶ್ ಅವರನ್ನು ಗ್ರಾಮಸ್ಥರು ಮತ್ತು ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ್ವರಾಚಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>