<p><strong>ಕಡೂರು:</strong> ತಾಲ್ಲೂಕಿನ ಖಂಡುಗದಹಳ್ಳಿ ಸೋಮೇಶ್ವರ ಸ್ವಾಮಿಯ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.</p>.<p>ಸಂಪ್ರದಾಯದಂತೆ ಮಹಾಶಿವರಾತ್ರಿ ಹಬ್ಬದ ಮರುದಿನ ಇಲ್ಲಿ ರಥೋತ್ಸವ ನಡೆಯುತ್ತದೆ. ಬೆಳಿಗ್ಗೆ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ವಿಶೇಷ ಅಭಿಷೇಕ, ಪೂಜಾ ಕಾರ್ಯಕ್ರಮ ನಡೆದವು. ಬಳಿಕ ಸ್ವಾಮಿಯ ಉತ್ಸವಮೂರ್ತಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ದೇವಸ್ಥಾನದ ಆವರಣದಲ್ಲಿ ಭಕ್ತರ ಜಯಘೋಷಗಳ ನಡುವೆ ರಥೋತ್ಸವ ನಡೆಸಲಾಯಿತು.</p>.<p>ಪೂಜಾರ್ ಶೇಖರ್ ಮತ್ತು ಸತೀಶ್ ತಂಡದವರಿಂದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಬಿಂಗಯ್ಯ ಭೃಂಗಿಗಳ ವಂಶಸ್ಥರಿಂದ ವಿಶೇಷ ಪೂಜೆಗಳು ನಡೆದವು. ರಥೋತ್ಸವದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ದೇವಾಲಯದ ವತಿಯಿಂದ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯದ ಧರ್ಮದರ್ಶಿ ಕೆ.ಬಿ. ಸೋಮೇಶ್ ನೇತೃತ್ವ ವಹಿಸಿದ್ದರು.</p>.<p>ಖಂಡುಗದಹಳ್ಳಿ, ಕಡೂರು, ಯಳ್ಳಂಬಳಸೆ, ಯಳಗೊಂಡನಹಳ್ಳಿ ಸೇರಿದಂತೆ ಸುತ್ತಮುತ್ತಲ ಭಾಗದ ಭಕ್ತರು ಭಾಗವಹಿಸಿದ್ದರು. ರಥ ಎಳೆಯುತ್ತಿದ್ದಂತೆ ಆಕಾಶದಲ್ಲಿ ಮೂರು ಗರುಡಗಳು ದೇವಾಲಯ ಸುತ್ತು ಹಾಕುತ್ತಿದ್ದ ದೃಶ್ಯವನ್ನು ಕಂಡ ಭಕ್ತರು ಅಚ್ಚರಿಯಿಂದ ಗಮನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ತಾಲ್ಲೂಕಿನ ಖಂಡುಗದಹಳ್ಳಿ ಸೋಮೇಶ್ವರ ಸ್ವಾಮಿಯ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.</p>.<p>ಸಂಪ್ರದಾಯದಂತೆ ಮಹಾಶಿವರಾತ್ರಿ ಹಬ್ಬದ ಮರುದಿನ ಇಲ್ಲಿ ರಥೋತ್ಸವ ನಡೆಯುತ್ತದೆ. ಬೆಳಿಗ್ಗೆ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ವಿಶೇಷ ಅಭಿಷೇಕ, ಪೂಜಾ ಕಾರ್ಯಕ್ರಮ ನಡೆದವು. ಬಳಿಕ ಸ್ವಾಮಿಯ ಉತ್ಸವಮೂರ್ತಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ದೇವಸ್ಥಾನದ ಆವರಣದಲ್ಲಿ ಭಕ್ತರ ಜಯಘೋಷಗಳ ನಡುವೆ ರಥೋತ್ಸವ ನಡೆಸಲಾಯಿತು.</p>.<p>ಪೂಜಾರ್ ಶೇಖರ್ ಮತ್ತು ಸತೀಶ್ ತಂಡದವರಿಂದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಬಿಂಗಯ್ಯ ಭೃಂಗಿಗಳ ವಂಶಸ್ಥರಿಂದ ವಿಶೇಷ ಪೂಜೆಗಳು ನಡೆದವು. ರಥೋತ್ಸವದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ದೇವಾಲಯದ ವತಿಯಿಂದ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯದ ಧರ್ಮದರ್ಶಿ ಕೆ.ಬಿ. ಸೋಮೇಶ್ ನೇತೃತ್ವ ವಹಿಸಿದ್ದರು.</p>.<p>ಖಂಡುಗದಹಳ್ಳಿ, ಕಡೂರು, ಯಳ್ಳಂಬಳಸೆ, ಯಳಗೊಂಡನಹಳ್ಳಿ ಸೇರಿದಂತೆ ಸುತ್ತಮುತ್ತಲ ಭಾಗದ ಭಕ್ತರು ಭಾಗವಹಿಸಿದ್ದರು. ರಥ ಎಳೆಯುತ್ತಿದ್ದಂತೆ ಆಕಾಶದಲ್ಲಿ ಮೂರು ಗರುಡಗಳು ದೇವಾಲಯ ಸುತ್ತು ಹಾಕುತ್ತಿದ್ದ ದೃಶ್ಯವನ್ನು ಕಂಡ ಭಕ್ತರು ಅಚ್ಚರಿಯಿಂದ ಗಮನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>