ಕಳೆದ ಎರಡು ವರ್ಷ ಕೋವಿಡ್ ಕಾರಣದಿಂದ ರಥೋತ್ಸವ ನಡೆದಿರಲಿಲ್ಲ. ಕಳೆದ ಸಂವತ್ಸರದ ಜನವರಿಯಲ್ಲಿ ಸರಳ ಮತ್ತು ಸಾಂಪ್ರದಾಯಿಕವಾಗಿ ರಥೋತ್ಸವ ನಡೆಸಲಾಗಿತ್ತು. ಈ ಕಾರಣದಿಂದ ಇಂದಿನ ರಥೋತ್ಸವದಲ್ಲಿ ಜನಸಂದಣಿ ಹೆಚ್ಚಿತ್ತು. ದೇವಾಲಯದ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯದ ಧರ್ಮದರ್ಶಿ ಮಂಡಳಿ ಕಾರ್ಯಾಧ್ಯಕ್ಷ ಎಂ.ಟಿ.ಹನುಮಂತಯ್ಯ, ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ಮತ್ತು ಮಂಡಳಿ ಸದಸ್ಯರು ಇದ್ದರು.