<p><strong>ಕಡೂರು (ಚಿಕ್ಕಮಗಳೂರು):</strong> ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಸಭೆಯಲ್ಲಿ ಶಾಸಕರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರರ ಪಕ್ಕ ಕುಳಿತು ಸಭೆ ನಡೆಸಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ‘ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಘಟನೆಯ ಕುರಿತು ವರದಿ ನೀಡುವಂತೆ ಕಡೂರು ತಹಶೀಲ್ದಾರ್ಗೆ ಸೂಚಿಸಿದ್ದೇನೆ. ಅವರು ವರದಿ ನೀಡಿದ ಬಳಿಕ ಸೂಕ್ತ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ಕಂದಾಯ ಗ್ರಾಮ, ಉಪಗ್ರಾಮಗಳ ರಚನೆ ಬಗ್ಗೆ ಮಾರ್ಚ್ 16ರೊಳಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿದ್ದು, ಆ ಕುರಿತು ಎಡಿಎಲ್ಆರ್, ಉಪ ತಹಶೀಲ್ದಾರ್, ಕಂದಾಯ ಅಧಿಕಾರಿಗಳು, ಪಿಡಿಒಗಳ ಸಭೆಯನ್ನು ಗುರುವಾರ ಶಾಸಕ ಕೆ.ಎಸ್. ಆನಂದ್ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು.</p>.<p>ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಕಾರಣ ಸಭೆಗೆ ಹಾಜರಾಗಿರಲಿಲ್ಲ. ಆಗ ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾ.ಪಂ ಇಒ ಸಿ.ಆರ್. ಪ್ರವೀಣ್ ಮತ್ತು ಆರ್ಎಫ್ಒ ಎನ್.ಆರ್. ಹರೀಶ್ ಇದ್ದ ವೇದಿಕೆಯಲ್ಲಿ ಮಂಜುನಾಥ್ ತಹಶೀಲ್ದಾರ್ ಪಕ್ಕವೇ ಕುಳಿತು ಸಭೆಯಲ್ಲಿ ಮಾಹಿತಿ ಪಡೆದಿದ್ದಾರೆ.</p>.<p>‘ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರತಿರೋಧ ತೋರಿಸದೆ ಕರ್ತವ್ಯಲೋಪ ಎಸಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳು ಹರಿದಾಡುತ್ತಿವೆ. ಜಿಲ್ಲಾಧಿಕಾರಿ ಸೂಕ್ತಕ್ರಮ ವಹಿಸಬೇಕು. ಇಲ್ಲವಾದರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಅವರಿಗೆ ದೂರು ಸಲ್ಲಿಸಲಾಗುವುದು’ ಎಂದು ರವಿಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು (ಚಿಕ್ಕಮಗಳೂರು):</strong> ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಸಭೆಯಲ್ಲಿ ಶಾಸಕರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರರ ಪಕ್ಕ ಕುಳಿತು ಸಭೆ ನಡೆಸಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ‘ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಘಟನೆಯ ಕುರಿತು ವರದಿ ನೀಡುವಂತೆ ಕಡೂರು ತಹಶೀಲ್ದಾರ್ಗೆ ಸೂಚಿಸಿದ್ದೇನೆ. ಅವರು ವರದಿ ನೀಡಿದ ಬಳಿಕ ಸೂಕ್ತ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ಕಂದಾಯ ಗ್ರಾಮ, ಉಪಗ್ರಾಮಗಳ ರಚನೆ ಬಗ್ಗೆ ಮಾರ್ಚ್ 16ರೊಳಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿದ್ದು, ಆ ಕುರಿತು ಎಡಿಎಲ್ಆರ್, ಉಪ ತಹಶೀಲ್ದಾರ್, ಕಂದಾಯ ಅಧಿಕಾರಿಗಳು, ಪಿಡಿಒಗಳ ಸಭೆಯನ್ನು ಗುರುವಾರ ಶಾಸಕ ಕೆ.ಎಸ್. ಆನಂದ್ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು.</p>.<p>ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಕಾರಣ ಸಭೆಗೆ ಹಾಜರಾಗಿರಲಿಲ್ಲ. ಆಗ ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾ.ಪಂ ಇಒ ಸಿ.ಆರ್. ಪ್ರವೀಣ್ ಮತ್ತು ಆರ್ಎಫ್ಒ ಎನ್.ಆರ್. ಹರೀಶ್ ಇದ್ದ ವೇದಿಕೆಯಲ್ಲಿ ಮಂಜುನಾಥ್ ತಹಶೀಲ್ದಾರ್ ಪಕ್ಕವೇ ಕುಳಿತು ಸಭೆಯಲ್ಲಿ ಮಾಹಿತಿ ಪಡೆದಿದ್ದಾರೆ.</p>.<p>‘ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರತಿರೋಧ ತೋರಿಸದೆ ಕರ್ತವ್ಯಲೋಪ ಎಸಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳು ಹರಿದಾಡುತ್ತಿವೆ. ಜಿಲ್ಲಾಧಿಕಾರಿ ಸೂಕ್ತಕ್ರಮ ವಹಿಸಬೇಕು. ಇಲ್ಲವಾದರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಅವರಿಗೆ ದೂರು ಸಲ್ಲಿಸಲಾಗುವುದು’ ಎಂದು ರವಿಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>