<p>ಕಡೂರು: ‘ತಾಲ್ಲೂಕಿನ ವೃತ್ತಿನಿರತ 134 ಕುಶಲಕರ್ಮಿಗಳಿಗೆ 2025-26ನೇ ಸಾಲಿನಲ್ಲಿ ಗ್ರಾಮೀಣ ಕೈಗಾರಿಕೆ ಇಲಾಖೆಯ ವತಿಯಿಂದ ಸುಧಾರಿತ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗಿದೆ’ ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಆಸಂದಿ ಟಿ. ಕಲ್ಲೇಶ್ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಗ್ರಾಮೀಣ ಕೈಗಾರಿಕಾ ಇಲಾಖೆಯ ವತಿಯಿಂದ ಫಲಾನುಭವಿಗಳಿಗೆ ಉಚಿತ ಉಪಕರಣ ವಿತರಿಸಿ ಅವರು ಮಾತನಾಡಿದರು.</p>.<p>ಮರಗೆಲಸ, ಗಾರೆ ಕೆಲಸ ಮತ್ತಿತರ ಕುಶಲಕರ್ಮಿಗಳನ್ನು ಗುರುತಿಸಿ ಸುಮಾರು ₹10.72 ಲಕ್ಷ ವೆಚ್ಚದ ಸಲಕರಣೆಗಳನ್ನು ನೀಡಲಾಗಿದೆ. ಶಾಸಕ ಕೆ.ಎಸ್.ಆನಂದ್ ಅವರು 134 ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದಾರೆ. ಕುಶಲಕರ್ಮಿಗಳು ಇದರ ಸದುಪಯೋಗ ಪಡೆದುಕೊಂಡು ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸುವಂತಾಗಲಿ ಎಂದು ಹಾರೈಸಿದರು.</p>.<p>ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಎನ್. ಚಂದ್ರಶೇಖರ್ ಮಾತನಾಡಿ, ಈ ಸಾಲಿನಲ್ಲಿ 134 ಫಲಾನುಭವಿಗಳನ್ನು ಗುರುತಿಸಿ ಉಪಕರಣಗಳ ಕಿಟ್ ವಿತರಿಸಿದ್ದು, ಪರಿಶಿಷ್ಟ ಜಾತಿಯ 21, ಪರಿಶಿಷ್ಟ ಪಂಗಡ 5, ಅಲ್ಪಸಂಖ್ಯಾತರಿಗೆ 18, ಸಾಮಾನ್ಯ ವರ್ಗದ 90 ಫಲಾನುಭವಿಗಳನ್ನು ಗುರುತಿಸಿ ಪರಿಕರ ನೀಡಲಾಗಿದೆ. ಯಾವುದೇ ಅಡಚಣೆ, ಆಕ್ಷೇಪಣೆ ಇಲ್ಲದಂತೆ ಆಯ್ಕೆ ನಡೆದಿದೆ ಎಂದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ಪ್ರವೀಣ್ ಹಾಗೂ ಫಲಾನುಭವಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-126-1323895803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡೂರು: ‘ತಾಲ್ಲೂಕಿನ ವೃತ್ತಿನಿರತ 134 ಕುಶಲಕರ್ಮಿಗಳಿಗೆ 2025-26ನೇ ಸಾಲಿನಲ್ಲಿ ಗ್ರಾಮೀಣ ಕೈಗಾರಿಕೆ ಇಲಾಖೆಯ ವತಿಯಿಂದ ಸುಧಾರಿತ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗಿದೆ’ ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಆಸಂದಿ ಟಿ. ಕಲ್ಲೇಶ್ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಗ್ರಾಮೀಣ ಕೈಗಾರಿಕಾ ಇಲಾಖೆಯ ವತಿಯಿಂದ ಫಲಾನುಭವಿಗಳಿಗೆ ಉಚಿತ ಉಪಕರಣ ವಿತರಿಸಿ ಅವರು ಮಾತನಾಡಿದರು.</p>.<p>ಮರಗೆಲಸ, ಗಾರೆ ಕೆಲಸ ಮತ್ತಿತರ ಕುಶಲಕರ್ಮಿಗಳನ್ನು ಗುರುತಿಸಿ ಸುಮಾರು ₹10.72 ಲಕ್ಷ ವೆಚ್ಚದ ಸಲಕರಣೆಗಳನ್ನು ನೀಡಲಾಗಿದೆ. ಶಾಸಕ ಕೆ.ಎಸ್.ಆನಂದ್ ಅವರು 134 ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದಾರೆ. ಕುಶಲಕರ್ಮಿಗಳು ಇದರ ಸದುಪಯೋಗ ಪಡೆದುಕೊಂಡು ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸುವಂತಾಗಲಿ ಎಂದು ಹಾರೈಸಿದರು.</p>.<p>ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಎನ್. ಚಂದ್ರಶೇಖರ್ ಮಾತನಾಡಿ, ಈ ಸಾಲಿನಲ್ಲಿ 134 ಫಲಾನುಭವಿಗಳನ್ನು ಗುರುತಿಸಿ ಉಪಕರಣಗಳ ಕಿಟ್ ವಿತರಿಸಿದ್ದು, ಪರಿಶಿಷ್ಟ ಜಾತಿಯ 21, ಪರಿಶಿಷ್ಟ ಪಂಗಡ 5, ಅಲ್ಪಸಂಖ್ಯಾತರಿಗೆ 18, ಸಾಮಾನ್ಯ ವರ್ಗದ 90 ಫಲಾನುಭವಿಗಳನ್ನು ಗುರುತಿಸಿ ಪರಿಕರ ನೀಡಲಾಗಿದೆ. ಯಾವುದೇ ಅಡಚಣೆ, ಆಕ್ಷೇಪಣೆ ಇಲ್ಲದಂತೆ ಆಯ್ಕೆ ನಡೆದಿದೆ ಎಂದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ಪ್ರವೀಣ್ ಹಾಗೂ ಫಲಾನುಭವಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-126-1323895803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>