<p>ಪ್ರಜಾವಾಣಿ ವಾರ್ತೆ</p>.<p><strong>ಕಡೂರು</strong>: ಬಾಲಕಿಗೆ ಪುಸಲಾಯಿಸಿ ಲಾಡ್ಜ್ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದ ಇಬ್ಬರು ಅಪರಾಧಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.</p>.<p>ಕಡೂರು ತಾಲ್ಲೂಕಿನ ಚಿಕ್ಕಂಗಳದ ಕಿರಣ್ ನಾಯಕ, ಅಭಿಷೇಕ್ ನಾಯ್ಕ ಶಿಕ್ಷೆಗೆ ಒಳಗಾದವರು. ಮೊದಲ ಆರೋಪಿ ಕಿರಣ್ನಾಯಕಗೆ ₹41ಸಾವಿರ ದಂಡ, ಎರಡನೇ ಆರೋಪಿ ಅಭಿಷೇಕ್ ನಾಯ್ಕಗೆ ₹11 ಸಾವಿರ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ.</p>.<p>2023ರ ನವೆಂಬರ್ನಲ್ಲಿ ಪ್ರಕರಣ ನಡೆದಿದ್ದು, ಒಂದನೇ ಆರೋಪಿ ಕಿರಣ್ ನಾಯಕ, ಎರಡನೇ ಆರೋಪಿ ಅಭಿಷೇಕ್ ನಾಯ್ಕನ ಸಹಾಯದಿಂದ ಬಾಲಕಿಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಈ ಕುರಿತು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿತ್ತು.</p>.<p>ವೃತ್ತ ನಿರೀಕ್ಷಕ ಕೆ.ಆರ್.ಶಿವಕುಮಾರ್ ಪ್ರಕರಣದ ತನಿಖೆಯನ್ನು ನಡೆಸಿ, ಪ್ರಭಾರ ವೃತ್ತ ನಿರೀಕ್ಷಕ ಶ್ರೀಕಾಂತ್ ಎನ್.ಎಸ್.ಆರೋಪಿತರ ವಿರುದ್ಧ ಚಿಕ್ಕಮಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಿಶೇಷ ಸರ್ಕಾರಿ ಅಭಿಯೋಜಕ ಭರತ್ ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಕಡೂರು</strong>: ಬಾಲಕಿಗೆ ಪುಸಲಾಯಿಸಿ ಲಾಡ್ಜ್ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದ ಇಬ್ಬರು ಅಪರಾಧಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.</p>.<p>ಕಡೂರು ತಾಲ್ಲೂಕಿನ ಚಿಕ್ಕಂಗಳದ ಕಿರಣ್ ನಾಯಕ, ಅಭಿಷೇಕ್ ನಾಯ್ಕ ಶಿಕ್ಷೆಗೆ ಒಳಗಾದವರು. ಮೊದಲ ಆರೋಪಿ ಕಿರಣ್ನಾಯಕಗೆ ₹41ಸಾವಿರ ದಂಡ, ಎರಡನೇ ಆರೋಪಿ ಅಭಿಷೇಕ್ ನಾಯ್ಕಗೆ ₹11 ಸಾವಿರ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ.</p>.<p>2023ರ ನವೆಂಬರ್ನಲ್ಲಿ ಪ್ರಕರಣ ನಡೆದಿದ್ದು, ಒಂದನೇ ಆರೋಪಿ ಕಿರಣ್ ನಾಯಕ, ಎರಡನೇ ಆರೋಪಿ ಅಭಿಷೇಕ್ ನಾಯ್ಕನ ಸಹಾಯದಿಂದ ಬಾಲಕಿಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಈ ಕುರಿತು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿತ್ತು.</p>.<p>ವೃತ್ತ ನಿರೀಕ್ಷಕ ಕೆ.ಆರ್.ಶಿವಕುಮಾರ್ ಪ್ರಕರಣದ ತನಿಖೆಯನ್ನು ನಡೆಸಿ, ಪ್ರಭಾರ ವೃತ್ತ ನಿರೀಕ್ಷಕ ಶ್ರೀಕಾಂತ್ ಎನ್.ಎಸ್.ಆರೋಪಿತರ ವಿರುದ್ಧ ಚಿಕ್ಕಮಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಿಶೇಷ ಸರ್ಕಾರಿ ಅಭಿಯೋಜಕ ಭರತ್ ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>