<p><strong>ಕಡೂರು</strong>: ಬಂಡಿಕೊಪ್ಪಲು ಗ್ರಾಮದಿಂದ ಸಖರಾಯಪಟ್ಟಣ ವ್ಯಾಪ್ತಿಯ ಕಂಚುಗಾರನಹಳ್ಳಿಗೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ನಾಗೇನಹಳ್ಳಿ ಸಮೀಪ ರಸ್ತೆಗೆ ಅಡ್ಡ ಬಂದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.</p>.<p>ಬಂಡಿಕೊಪ್ಪಲಿನಲ್ಲಿ ವಾಸವಿದ್ದ ನಿವೃತ್ತ ಸೈನಿಕ ನಟೇಶ್ (46) ಮೃತಪಟ್ಟವರು. ಕಂಚುಗಾರಹಳ್ಳಿಯಲ್ಲಿ ಗುರುವಾರ ನಟೇಶ್ ಅವರ ತಂದೆ ಮೃತಪಟ್ಟಿದ್ದು, ಈ ಸಂಬಂಧ ಗ್ರಾಮಕ್ಕೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ಗಾಯಗೊಂಡಿದ್ದ ಅವರನ್ನು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಮೃತಪಟ್ಟರು. ಅವರ ಸಹೋದರ ನೀಡಿದ ದೂರಿನ ಅನ್ವಯ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-126-198074847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ಬಂಡಿಕೊಪ್ಪಲು ಗ್ರಾಮದಿಂದ ಸಖರಾಯಪಟ್ಟಣ ವ್ಯಾಪ್ತಿಯ ಕಂಚುಗಾರನಹಳ್ಳಿಗೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ನಾಗೇನಹಳ್ಳಿ ಸಮೀಪ ರಸ್ತೆಗೆ ಅಡ್ಡ ಬಂದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.</p>.<p>ಬಂಡಿಕೊಪ್ಪಲಿನಲ್ಲಿ ವಾಸವಿದ್ದ ನಿವೃತ್ತ ಸೈನಿಕ ನಟೇಶ್ (46) ಮೃತಪಟ್ಟವರು. ಕಂಚುಗಾರಹಳ್ಳಿಯಲ್ಲಿ ಗುರುವಾರ ನಟೇಶ್ ಅವರ ತಂದೆ ಮೃತಪಟ್ಟಿದ್ದು, ಈ ಸಂಬಂಧ ಗ್ರಾಮಕ್ಕೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ಗಾಯಗೊಂಡಿದ್ದ ಅವರನ್ನು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಮೃತಪಟ್ಟರು. ಅವರ ಸಹೋದರ ನೀಡಿದ ದೂರಿನ ಅನ್ವಯ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-126-198074847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>