ಶಿವಾಲಯ ಕೆರೆ ಬಳಕೆದಾರರ ಸಂಘದ ಅಧ್ಯಕ್ಷ ಕೆ.ಸಿ.ಶಿವಪ್ರಸಾದ್ ಮಾತನಾಡಿ, ‘ಗ್ರಾಮಸ್ಥರು ಅಭಿವೃದ್ಧಿ ಕಾರ್ಯಗಳ ವಿರೋಧಿಗಳಲ್ಲ. ಆದರೆ, ಅಭಿವೃದ್ಧಿಯ ಹೆಸರಿನಲ್ಲಿ ಕೆರೆಯ ಮೂಲ ಸ್ವರೂಪಕ್ಕೆ ಧಕ್ಕೆ ಬರುವಂತೆ ಮಣ್ಣು ತೆಗೆಯುವುದು ಸರಿಯಲ್ಲ. ಈ ಬಗ್ಗೆ ದೂರು ಸಲ್ಲಿಸಿದ್ದರೂ ಇಲ್ಲಿಯ ತನಕ ಯಾರೊಬ್ಬ ಅಧಿಕಾರಿಯೂ ಸಮಸ್ಯೆ ಆಲಿಸಿಲ್ಲ’ ಎಂದು ದೂರಿದರು.