ಕೃಷಿಕ ಗೋಪಾಲ ಗೌಡ, ಮಲ್ಲೇಗೌಡ ಅವರ ತೋಟ ಮತ್ತು ಆಸುಪಾಸಿನ ತೋಟಗಳಲ್ಲಿ ಆನೆಗಳು ರಾತ್ರಿಯಿಡೀ ಓಡಾಡಿವೆ. ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿವೆ. ದಾರಿಯಲ್ಲಿ ಅಡ್ಡಲಾಗಿ ಸಿಕ್ಕ ಬೇಲಿಯನ್ನೂ ಪುಡಿ ಮಾಡಿವೆ. 2 ದಿನಗಳಿಂದ ದುಗ್ಗಪ್ಪನಕಟ್ಟೆ ಪ್ರದೇಶದ ಅಕೇಶಿಯಾ ಪ್ಲಾಂಟೇಶನ್ ಒಳಗೆ ಆಶ್ರಯ ಪಡೆದಿದ್ದ ಆನೆಗಳು ಭಾನುವಾರ ರಾತ್ರಿ ತೋಟಗಳಿಗೆ ನುಗ್ಗಿ ನಷ್ಟ ಉಂಟು ಮಾಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.