<p><strong>ಕಳಸ:</strong> ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕವನ್ನು ಶಾಸಕಿ ನಯನಾ ಮೋಟಮ್ಮ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ‘ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗಿದ್ದು, ದಿನಕ್ಕೆ 8 ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ನೀಡಬಹುದಾಗಿದೆ. ಖಾಸಗಿ ಸಂಸ್ಥೆಯೊಂದು ಘಟಕದ ನಿರ್ವಹಣೆ ಮಾಡಲಿದೆ’ ಎಂದರು. ಹಾಗೇ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.</p>.<p>ವೈದ್ಯ ಡಾ.ಮಂಜುನಾಥ್ ಮಾತನಾಡಿ, ‘ಕಾಯಂ ವೈದ್ಯರು ಆಸ್ಪತ್ರೆಯಲ್ಲಿ ಇದ್ದರೆ ಇನ್ನಷ್ಟು ಆತ್ಮವಿಶ್ವಾಸದಿಂದ ಕೆಲಸ ಮಾಡಬಹುದು. ಮರಣೋತ್ತರ ಪರೀಕ್ಷೆ, ಹೆರಿಗೆ ಮಾಡಲಾರದೆ ಸಮಸ್ಯೆ ಆಗುತ್ತಿದೆ’ ಎಂದರು.</p>.<p>ಆರೋಗ್ಯ ಸಿಬ್ಬಂದಿ ಮಾತನಾಡಿ, ರೋಗಿಗಳಿಗೆ ತುರ್ತು ಸೇವೆ ನೀಡಲು ಇನ್ನಷ್ಟು ಆರೋಗ್ಯ ಸಹಾಯಕಿಯರು ಮತ್ತು ಫಾರ್ಮಾಸಿಸ್ಟ್ ಸಿಬ್ಬಂದಿ ನೇಮಕ ಆಗಬೇಕು ಎಂದರು. </p>.<p>ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಮಾತನಾಡಿ, ‘ಆಸ್ಪತ್ರೆಗೆ ಕಾಯಂ ವೈದ್ಯರ ನೇಮಕ ಮಾಡಿ ಅವರನ್ನೇ ಆಡಳಿತ ವೈದ್ಯಾಧಿಕಾರಿ ಮಾಡಿದರೆ ಆಸ್ಪತ್ರೆಯ ಆಡಳಿತ ಸುಸೂತ್ರವಾಗುತ್ತದೆ’ ಎಂದರು.</p>.<p>ಕಾಯಂ ವೈದ್ಯರ ನೇಮಕದ ಬಗ್ಗೆ ಕಳೆದ ಒಂದು ವರ್ಷದಿಂದ ಸತತ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಕಳಸದಲ್ಲಿ ಕೆಲಸ ಮಾಡಲು ವೈದ್ಯರಿಗೆ ಆಸಕ್ತಿ ಇಲ್ಲ. ಆದರೂ ವೈದ್ಯರನ್ನು ಮತ್ತು ಅಗತ್ಯ ಸಿಬ್ಬಂದಿ ನೇಮಿಸುವ ಪ್ರಯತ್ನ ಸಾಗಿದೆ ಎಂದು ನಯನಾ ಮೋಟಮ್ಮ ಹೇಳಿದರು.</p>.<p>ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ, ಸದಸ್ಯ ವೀರೇಂದ್ರ, ಮುಖಂಡರಾದ ಪ್ರಭಾಕರ್, ರಾಜೇಂದ್ರ, ರಫೀಕ್, ಶ್ರೇಣಿಕ, ವಿಶ್ವನಾಥ್, ಲಕ್ಷ್ಮಣಾಚಾರ್, ಕೆ.ಎಲ್.ವಾಸು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ:</strong> ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕವನ್ನು ಶಾಸಕಿ ನಯನಾ ಮೋಟಮ್ಮ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ‘ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗಿದ್ದು, ದಿನಕ್ಕೆ 8 ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ನೀಡಬಹುದಾಗಿದೆ. ಖಾಸಗಿ ಸಂಸ್ಥೆಯೊಂದು ಘಟಕದ ನಿರ್ವಹಣೆ ಮಾಡಲಿದೆ’ ಎಂದರು. ಹಾಗೇ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.</p>.<p>ವೈದ್ಯ ಡಾ.ಮಂಜುನಾಥ್ ಮಾತನಾಡಿ, ‘ಕಾಯಂ ವೈದ್ಯರು ಆಸ್ಪತ್ರೆಯಲ್ಲಿ ಇದ್ದರೆ ಇನ್ನಷ್ಟು ಆತ್ಮವಿಶ್ವಾಸದಿಂದ ಕೆಲಸ ಮಾಡಬಹುದು. ಮರಣೋತ್ತರ ಪರೀಕ್ಷೆ, ಹೆರಿಗೆ ಮಾಡಲಾರದೆ ಸಮಸ್ಯೆ ಆಗುತ್ತಿದೆ’ ಎಂದರು.</p>.<p>ಆರೋಗ್ಯ ಸಿಬ್ಬಂದಿ ಮಾತನಾಡಿ, ರೋಗಿಗಳಿಗೆ ತುರ್ತು ಸೇವೆ ನೀಡಲು ಇನ್ನಷ್ಟು ಆರೋಗ್ಯ ಸಹಾಯಕಿಯರು ಮತ್ತು ಫಾರ್ಮಾಸಿಸ್ಟ್ ಸಿಬ್ಬಂದಿ ನೇಮಕ ಆಗಬೇಕು ಎಂದರು. </p>.<p>ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಮಾತನಾಡಿ, ‘ಆಸ್ಪತ್ರೆಗೆ ಕಾಯಂ ವೈದ್ಯರ ನೇಮಕ ಮಾಡಿ ಅವರನ್ನೇ ಆಡಳಿತ ವೈದ್ಯಾಧಿಕಾರಿ ಮಾಡಿದರೆ ಆಸ್ಪತ್ರೆಯ ಆಡಳಿತ ಸುಸೂತ್ರವಾಗುತ್ತದೆ’ ಎಂದರು.</p>.<p>ಕಾಯಂ ವೈದ್ಯರ ನೇಮಕದ ಬಗ್ಗೆ ಕಳೆದ ಒಂದು ವರ್ಷದಿಂದ ಸತತ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಕಳಸದಲ್ಲಿ ಕೆಲಸ ಮಾಡಲು ವೈದ್ಯರಿಗೆ ಆಸಕ್ತಿ ಇಲ್ಲ. ಆದರೂ ವೈದ್ಯರನ್ನು ಮತ್ತು ಅಗತ್ಯ ಸಿಬ್ಬಂದಿ ನೇಮಿಸುವ ಪ್ರಯತ್ನ ಸಾಗಿದೆ ಎಂದು ನಯನಾ ಮೋಟಮ್ಮ ಹೇಳಿದರು.</p>.<p>ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ, ಸದಸ್ಯ ವೀರೇಂದ್ರ, ಮುಖಂಡರಾದ ಪ್ರಭಾಕರ್, ರಾಜೇಂದ್ರ, ರಫೀಕ್, ಶ್ರೇಣಿಕ, ವಿಶ್ವನಾಥ್, ಲಕ್ಷ್ಮಣಾಚಾರ್, ಕೆ.ಎಲ್.ವಾಸು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>