<p>ಕಳಸ: ಕಳೆದ ಮೂರು ದಿನಗಳಿಂದ ತಾಲ್ಲೂಕಿನಾದ್ಯಂತ ಪಡಿತರ ಪಡೆಯಲು ಜನರು ಪಡಿಪಾಟಲು ಪಡುತ್ತಿದ್ದಾರೆ.</p>.<p>ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಅಕ್ಕಿ ಪಡೆಯಲು ಜನರು ಸಾಲುಗಳಲ್ಲಿ ಇಡೀ ದಿನ ನಿಂತರೂ ಅಕ್ಕಿ ಪಡೆಯಲು ಆಗುತ್ತಿಲ್ಲ. ಈ ತಿಂಗಳ 31ರೊಳಗೆ ಅಕ್ಕಿ ಪಡೆದುಕೊಳ್ಳದಿದ್ದರೆ ಅಕ್ಕಿ ಕೈತಪ್ಪಿ ಹೋಗುತ್ತದೆ. ಆದರೆ, ಬಿಪಿಲ್ ಕಾರ್ಡುದಾರರು ಹೆಬ್ಬೆಟ್ಟು ಕೊಡಲು ಹೋದಾಗ ಸರ್ವರ್ ಸಮಸ್ಯೆ ಆಗುತ್ತಿದೆ. ಇದರಿಂದ ಇಡೀ ದಿನ ಸರತಿಯಲ್ಲಿ ನಿಂತರೂ ಅಕ್ಕಿ ಸಿಗದೆ ಜನರು ನಿರಾಸೆಯಿಂದ ಮನೆಗೆ ಮರಳುವಂತಾಗಿದೆ.</p>.<p>‘ಸರ್ವರ್ ಸಮಸ್ಯೆಯಿಂದಾಗಿ ಮೂರು ದಿನಗಳಿಂದ ನಮಗೆ ಪಡಿತರ ಪಡೆಯಲು ಆಗುತ್ತಿಲ್ಲ. ತೋಟದ ಕೆಲಸಕ್ಕೆ ರಜೆ ಮಾಡಿ ರೇಷನ್ ಪಡೆಯಲು ಬರುತ್ತೇವೆ. ಬಿಸಿಲಲ್ಲಿ ಇಡೀದಿನ ಕಾದರೂ ಅಕ್ಕಿ ಸಿಗುತ್ತಿಲ್ಲ’ ಎಂದು ಜನರು ಬೇಸರ ಹೊರಹಾಕಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-126-201096946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳಸ: ಕಳೆದ ಮೂರು ದಿನಗಳಿಂದ ತಾಲ್ಲೂಕಿನಾದ್ಯಂತ ಪಡಿತರ ಪಡೆಯಲು ಜನರು ಪಡಿಪಾಟಲು ಪಡುತ್ತಿದ್ದಾರೆ.</p>.<p>ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಅಕ್ಕಿ ಪಡೆಯಲು ಜನರು ಸಾಲುಗಳಲ್ಲಿ ಇಡೀ ದಿನ ನಿಂತರೂ ಅಕ್ಕಿ ಪಡೆಯಲು ಆಗುತ್ತಿಲ್ಲ. ಈ ತಿಂಗಳ 31ರೊಳಗೆ ಅಕ್ಕಿ ಪಡೆದುಕೊಳ್ಳದಿದ್ದರೆ ಅಕ್ಕಿ ಕೈತಪ್ಪಿ ಹೋಗುತ್ತದೆ. ಆದರೆ, ಬಿಪಿಲ್ ಕಾರ್ಡುದಾರರು ಹೆಬ್ಬೆಟ್ಟು ಕೊಡಲು ಹೋದಾಗ ಸರ್ವರ್ ಸಮಸ್ಯೆ ಆಗುತ್ತಿದೆ. ಇದರಿಂದ ಇಡೀ ದಿನ ಸರತಿಯಲ್ಲಿ ನಿಂತರೂ ಅಕ್ಕಿ ಸಿಗದೆ ಜನರು ನಿರಾಸೆಯಿಂದ ಮನೆಗೆ ಮರಳುವಂತಾಗಿದೆ.</p>.<p>‘ಸರ್ವರ್ ಸಮಸ್ಯೆಯಿಂದಾಗಿ ಮೂರು ದಿನಗಳಿಂದ ನಮಗೆ ಪಡಿತರ ಪಡೆಯಲು ಆಗುತ್ತಿಲ್ಲ. ತೋಟದ ಕೆಲಸಕ್ಕೆ ರಜೆ ಮಾಡಿ ರೇಷನ್ ಪಡೆಯಲು ಬರುತ್ತೇವೆ. ಬಿಸಿಲಲ್ಲಿ ಇಡೀದಿನ ಕಾದರೂ ಅಕ್ಕಿ ಸಿಗುತ್ತಿಲ್ಲ’ ಎಂದು ಜನರು ಬೇಸರ ಹೊರಹಾಕಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-126-201096946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>