ಉತ್ಸವ ಮೂರ್ತಿಗಳನ್ನು ಹೂವಿನಿಂದ ಶೃಂಗರಿಸಲಾಗಿತ್ತು. ಗ್ರಾಮದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಉತ್ಸವದಲ್ಲಿ ಜಾನಪದ ಕಲಾ ತಂಡಗಳು, ಮಂಗಳವಾದ್ಯಗಳು ಗಮನಸೆಳೆದವು. ದೇವರ ಉತ್ಸವ ಮೂರ್ತಿ ಹೊತ್ತ ಭಕ್ತರು, ಹರಕೆ ಹೊತ್ತವರು, ಕಾಳಿಕಾಂಬಾ ದೇವಾಲಯದ ಮುಂಭಾಗದಲ್ಲಿ ಕೆಂಡದ ಗುಂಡಿಯನ್ನು ಹಾಯ್ದರು. ಬಳಿಕ ಮೌನೇಶ್ವರ ಸ್ವಾಮಿ, ಕಾಳಿಕಾಂಬಾ ದೇವರ ಮೂರ್ತಿ ಪ್ರತಿಷ್ಠಾಪಿಸಿ, ರಥೋತ್ಸವ ನಡೆಸಲಾಯಿತು.