ಪಥ ಸಂಚಲನ ವಿಭಾಗದಲ್ಲಿ ವಾಸವಿ ಸುಬ್ರಹ್ಮಣ್ಯ ಶ್ರೇಷ್ಠಿ ಸಂಯುಕ್ತ ಶಾಲೆ ಪ್ರಥಮ ಮತ್ತು ಕನ್ನಡ ನೂತನ ಶಾಲಾ ತಂಡ ದ್ವಿತೀಯ ಸ್ಥಾನ ಪಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ವಿವಿಧ ಶಾಲೆಯ ಎಂಟು ತಂಡಗಳಿಗೆ ಬಹುಮಾನ ನೀಡಲಾಯಿತು. ವಾಸವಿ ಮತ್ತು ವಿದ್ಯಾ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳು ಛದ್ಮವೇಷ ಧರಿಸಿ ಗಮನ ಸೆಳೆದರು. ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ್ ಹರ್ತಿ, ಪಟ್ಟಣ ಪಂಚಾ ಯಿತಿ ಮುಖ್ಯಾಧಿಕಾರಿ ನಾಗರತ್ನಾ, ಉಪತಹಶೀಲ್ದಾರ್ ನೇತ್ರಾವತಿ, ಶಿರಸ್ತೇದಾರ ರಮೇಶ್, ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಈಶ್ವರಪ್ಪ, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಶಿವಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜಣ್ಣ, ನಿವೃತ್ತ ಅಧಿಕಾರಿ ಎಚ್. ಪುಟ್ಟಸ್ವಾಮಿ ಇದ್ದರು.