‘ಪರಿಷತ್ತಿನ ಸದಸ್ಯತ್ವ ನೋಂದಣಿ ಸರಳೀಕರಣ, ಆನ್ಲೈನ್ ನೋಂದಣಿಗೆ ವ್ಯವಸ್ಥೆ ಮಾಡಬೇಕು, ಪರಿಷತ್ತಿನಲ್ಲಿ ಮಹಿಳೆಯರಿಗೆ ಆದ್ಯತೆ (ಐದು ವರ್ಷಗಳಲ್ಲಿ ಕನಿಷ್ಠ ಇಬ್ಬರನ್ನು ಸಮ್ಮೇಳನಾಧ್ಯಕ್ಷ ರನ್ನಾಗಿ ಆಯ್ಕೆ ಮಾಡುವುದು) ನೀಡುವ ಎಂಬ ಗುರಿ ಇಟ್ಟುಕೊಂಡಿದ್ದೇನೆ. ಪರಿಷತ್ತಿನ ಅಳ, ಅಗಲಗಳನ್ನು ಅಧ್ಯಯನ ಮಾಡಿದ್ದೇನೆ. ಕನ್ನಡದ ಅಸ್ಮಿತೆ ಎತ್ತಿ ಹಿಡಿಯುವ ಕೆಲಸ ಮಾಡುತ್ತೇನೆ, ನವ ಮನ್ವಂತರ ಸ್ಥಾಪಿಸುತ್ತೇನೆ’ ಎಂದು ಭರವಸೆ ವ್ಯಕ್ತಪಡಿಸಿದರು.