ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ನ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಶುರುವಾಗಿದೆ.
ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೂರಿ ಶ್ರೀನಿವಾಸ್, ಶಿವಾನಂದ ಸ್ವಾಮಿ, ಸುಂದರ ಬಂಗೇರಾ, ವಿಜಯಕುಮಾರ್, ಎಚ್.ಡಿ. ರೇವಣ್ಣ ಕಣದಲ್ಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 1837 ಮತದಾರರು ಇದ್ದಾರೆ. 16 ಕಡೆ ಮತಗಟ್ಟೆ ಸ್ಥಾಪಿಸಲಾಗಿದೆ.