<p><strong>ಚಿಕ್ಕಮಗಳೂರು</strong>: ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ(ಕರಾರವೇ) ಪ್ರೀಮಿಯರ್ ಲೀಗ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.7, 8 ಮತ್ತು 9 ರಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಜಿ. ರಾಜ್ಪ್ರಶಾಂತ್ ಹೇಳಿದರು.</p>.<p>ಪ್ರಥಮ ಬಹುಮಾನ ₹50 ಸಾವಿರ, ದ್ವಿತೀಯ ಬಹುಮಾನ ₹20 ಸಾವಿರ, ತೃತೀಯ ಬಹುಮಾನ ₹8 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಮೊದಲು ನೋಂದಾಯಿಸಿದ 24 ತಂಡಗಳಿಗೆ ಮಾತ್ರ ಪಂದ್ಯಾವಳಿಯಲ್ಲಿ ಆಡಲು ಅವಕಾಶ ಇರುತ್ತದೆ. ಫೆ.3ರಂದು ತಂಡದ ಹೆಸರನ್ನು ನೋಂದಾಯಿಸಲು ಕೊನೆಯ ದಿನ. ಈಗಾಗಲೇ 12 ತಂಡಗಳು ಹೆಸರನ್ನು ನೋಂದಾಯಿಸಿವೆ ಎಂದು ಹೇಳಿದರು.</p>.<p>ಗ್ರಾಮೀಣ ಪ್ರದೇಶದವರು ತಂಡದಲ್ಲಿ ಆಯಾ ಹೋಬಳಿಯ ನಿವಾಸಿಯಾಗಿರಬೇಕು. ಬೇರೆ ಹೋಬಳಿಯವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅವಕಾಶ ಇರುವುದಿಲ್ಲ. ನಗರ ಪ್ರದೇಶದವರು 3 ಏರಿಯಾಗಳ ಆಟಗಾರರನ್ನು ಮಾತ್ರ ತಂಡಗಳಲ್ಲಿ ಸೇರಿಸಿಕೊಳ್ಳಲು ಅವಕಾಶ ಇರುತ್ತದೆ ಎಂದರು.</p>.<p>ಪ್ರತಿ ಪಂದ್ಯಗಳಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 90199 51837 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ನಿರ್ದೇಶಕ ಚಂದ್ರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ(ಕರಾರವೇ) ಪ್ರೀಮಿಯರ್ ಲೀಗ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.7, 8 ಮತ್ತು 9 ರಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಜಿ. ರಾಜ್ಪ್ರಶಾಂತ್ ಹೇಳಿದರು.</p>.<p>ಪ್ರಥಮ ಬಹುಮಾನ ₹50 ಸಾವಿರ, ದ್ವಿತೀಯ ಬಹುಮಾನ ₹20 ಸಾವಿರ, ತೃತೀಯ ಬಹುಮಾನ ₹8 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಮೊದಲು ನೋಂದಾಯಿಸಿದ 24 ತಂಡಗಳಿಗೆ ಮಾತ್ರ ಪಂದ್ಯಾವಳಿಯಲ್ಲಿ ಆಡಲು ಅವಕಾಶ ಇರುತ್ತದೆ. ಫೆ.3ರಂದು ತಂಡದ ಹೆಸರನ್ನು ನೋಂದಾಯಿಸಲು ಕೊನೆಯ ದಿನ. ಈಗಾಗಲೇ 12 ತಂಡಗಳು ಹೆಸರನ್ನು ನೋಂದಾಯಿಸಿವೆ ಎಂದು ಹೇಳಿದರು.</p>.<p>ಗ್ರಾಮೀಣ ಪ್ರದೇಶದವರು ತಂಡದಲ್ಲಿ ಆಯಾ ಹೋಬಳಿಯ ನಿವಾಸಿಯಾಗಿರಬೇಕು. ಬೇರೆ ಹೋಬಳಿಯವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅವಕಾಶ ಇರುವುದಿಲ್ಲ. ನಗರ ಪ್ರದೇಶದವರು 3 ಏರಿಯಾಗಳ ಆಟಗಾರರನ್ನು ಮಾತ್ರ ತಂಡಗಳಲ್ಲಿ ಸೇರಿಸಿಕೊಳ್ಳಲು ಅವಕಾಶ ಇರುತ್ತದೆ ಎಂದರು.</p>.<p>ಪ್ರತಿ ಪಂದ್ಯಗಳಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 90199 51837 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ನಿರ್ದೇಶಕ ಚಂದ್ರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>