<p><strong>ಕಾರ್ಕಳ: </strong>ತಾಲ್ಲೂಕಿನ ಬೆಳ್ಮಣ್ ರೋಟರಿ ಕ್ಲಬ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಬೆಳ್ಮಣ್ಣು ವಲಯ ಹಾಗೂ ರಕ್ತನಿಧಿ ಸಂಚಯ ಉಡುಪಿ ಇವುಗಳ ಆಶ್ರಯದಲ್ಲಿ ಮುಹೂರ್ತ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.</p>.<p>ಶಿಬಿರಕ್ಕೆ ಚಾಲನೆ ನೀಡಿದ ರಕ್ತನಿಧಿ ಸಂಚಯದ ವೈದ್ಯಾಧಿಕಾರಿ ಡಾ.ವೀಣಾ ಮಾತನಾಡಿ, ರಕ್ತದಾನದ ಉಪಯುಕ್ತತೆಯನ್ನು ನಾವು ಅರಿತಿರಬೇಕು. ಸಂಘಸಂಸ್ಥೆಗಳು ಸಮಾಜಮುಖಿಯಾಗಿ ಇಂತಹ ಶಿಬಿರಗಳನ್ನು ಆಯೋಜಿಸಬೇಕು ಎಂದರು.</p>.<p>ಬಜರಂಗದಳ ಉಡುಪಿ ಜಿಲ್ಲಾ ಸಹಸಂಚಾಲಕ ಚೇತನ್ ಪೆರಲ್ ಕೆ. ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮೂಲಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಈ ರೀತಿಯ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಜೀವ ಉಳಿಸುವ ಕಾಯಕ ನಡೆಸಲಾಗುತ್ತಿದೆ ಎಂದರು.</p>.<p>ಸೂರ್ಯಕಾಂತ ಶೆಟ್ಟಿ ಹಾಗೂ ವಲಯ ಸೇನಾನಿ ವಿಘ್ನೇಶ್ ಶೆಣೈ, ವಿಶ್ವ ಹಿಂದೂ ಪರಿಷತ್ ಬೆಳ್ಮಣ್ ವಲಯದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಮಾತನಾಡಿದರು. ರೋಟರಿ ಜಿಲ್ಲಾ ಯೂತ್ ಲಿಡರ್ಶಿಪ್ ಸಂಯೋಜಕ ಪಿಎಚ್ಎಫ್ ಶೈಲೇಂದ್ರ ರಾವ್ 60 ಬಾರಿ ರಕ್ತದಾನ ಮಾಡಿದ್ದು, ಅವರನ್ನು ಅಭಿನಂದಿಸಲಾಯಿತು.</p>.<p>ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಆಲ್ವಿನ್ ನೇರಿ ಪಿಂಟೊ ನಿರೂಪಿಸಿದರು. ಸದಸ್ಯ ಪ್ರದೀಪ್ ಶೆಟ್ಟಿ ವಂದಿಸಿದರು. ಶಿಬಿರದಲ್ಲಿ ದಾನಿಗಳಿಂದ 130 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ: </strong>ತಾಲ್ಲೂಕಿನ ಬೆಳ್ಮಣ್ ರೋಟರಿ ಕ್ಲಬ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಬೆಳ್ಮಣ್ಣು ವಲಯ ಹಾಗೂ ರಕ್ತನಿಧಿ ಸಂಚಯ ಉಡುಪಿ ಇವುಗಳ ಆಶ್ರಯದಲ್ಲಿ ಮುಹೂರ್ತ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.</p>.<p>ಶಿಬಿರಕ್ಕೆ ಚಾಲನೆ ನೀಡಿದ ರಕ್ತನಿಧಿ ಸಂಚಯದ ವೈದ್ಯಾಧಿಕಾರಿ ಡಾ.ವೀಣಾ ಮಾತನಾಡಿ, ರಕ್ತದಾನದ ಉಪಯುಕ್ತತೆಯನ್ನು ನಾವು ಅರಿತಿರಬೇಕು. ಸಂಘಸಂಸ್ಥೆಗಳು ಸಮಾಜಮುಖಿಯಾಗಿ ಇಂತಹ ಶಿಬಿರಗಳನ್ನು ಆಯೋಜಿಸಬೇಕು ಎಂದರು.</p>.<p>ಬಜರಂಗದಳ ಉಡುಪಿ ಜಿಲ್ಲಾ ಸಹಸಂಚಾಲಕ ಚೇತನ್ ಪೆರಲ್ ಕೆ. ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮೂಲಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಈ ರೀತಿಯ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಜೀವ ಉಳಿಸುವ ಕಾಯಕ ನಡೆಸಲಾಗುತ್ತಿದೆ ಎಂದರು.</p>.<p>ಸೂರ್ಯಕಾಂತ ಶೆಟ್ಟಿ ಹಾಗೂ ವಲಯ ಸೇನಾನಿ ವಿಘ್ನೇಶ್ ಶೆಣೈ, ವಿಶ್ವ ಹಿಂದೂ ಪರಿಷತ್ ಬೆಳ್ಮಣ್ ವಲಯದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಮಾತನಾಡಿದರು. ರೋಟರಿ ಜಿಲ್ಲಾ ಯೂತ್ ಲಿಡರ್ಶಿಪ್ ಸಂಯೋಜಕ ಪಿಎಚ್ಎಫ್ ಶೈಲೇಂದ್ರ ರಾವ್ 60 ಬಾರಿ ರಕ್ತದಾನ ಮಾಡಿದ್ದು, ಅವರನ್ನು ಅಭಿನಂದಿಸಲಾಯಿತು.</p>.<p>ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಆಲ್ವಿನ್ ನೇರಿ ಪಿಂಟೊ ನಿರೂಪಿಸಿದರು. ಸದಸ್ಯ ಪ್ರದೀಪ್ ಶೆಟ್ಟಿ ವಂದಿಸಿದರು. ಶಿಬಿರದಲ್ಲಿ ದಾನಿಗಳಿಂದ 130 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>