ಹಂಪಾಪುರದ ಗ್ರಾಮಸ್ಥರೂ ಆಗಿರುವ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಪಿ. ಮಂಜೇಗೌಡ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಪಿಎಂಜಿಎಸ್ನ ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ 2018ರಲ್ಲಿ ₹ 3.38 ಕೋಟಿ ವೆಚ್ಚದಲ್ಲಿ ಈ ರಸ್ತೆ ಕಾಮಗಾರಿ ಕೈಗೊಂಡಿದ್ದರು. ಕಾಮಗಾರಿ ಕಳಪೆಯಾಗಿದ್ದು, ರಸ್ತೆ ಬಿರುಕು ಬಿಟ್ಟಿದೆ. ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಕೆರೆ ಏರಿ ಒಡೆದರೆ ಪಕ್ಕದಲ್ಲಿನ ಜಮೀನುಗಳಿಗೆ ನೀರು ನುಗ್ಗುತ್ತದೆ. ತಕ್ಷಣವೇ ರಿಪೇರಿಗೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.