ಪತ್ರಿಕಾ ಸುದ್ದಿರೂಪದ ತುಣುಕೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದರು. ಬಸವನಹಳ್ಳಿ ಠಾಣೆಯಲ್ಲಿ ಮೂವರು ವಿರದ್ಧ ಪ್ರಕರಣ ದಾಖಲಾಗಿತ್ತು. ಐಪಿಸಿ 505(2) (ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ) ಕಲಂನಡಿ ಪ್ರಕರಣ ದಾಖಲಾಗಿತ್ತು.