<p><strong>ಚಿಕ್ಕಮಗಳೂರು: </strong>‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷವು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿದೆ, ಆ ಹುದ್ದೆಯನ್ನು ನಿರ್ವಹಿಸುತ್ತಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ತಾಲ್ಲೂಕಿನ ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಚಿಕ್ಕಮಗಳೂರು ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಬೇಕು ಎಂಬುದು ಜನರ, ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದೇನೆ’ ಎಂದು ಉತ್ತರಿಸಿದರು.</p>.<p>‘ಜನರ ಹಿತದೃಷ್ಟಿ ಇಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಬೇಕು. ಬಸವರಾಜ ಬೊಮ್ಮಾಯಿ ಅವರು ಅನುಭವಿ ಇದ್ದಾರೆ. ಆಡಳಿತ ದೃಷ್ಟಿ ಇಟ್ಟುಕೊಂಡು ಮತ್ತು ರಾಜಕೀಯ ಸಮತೋಲನ ಇಟ್ಟುಕೊಂಡು ನಿರ್ವಹಿಸುತ್ತಾರೆ ಎಂಬ ನಂಬಿಕೆ ಇದೆ. ಜನಹಿತ ಮತ್ತು ಪಕ್ಷ ಬಲವರ್ಧನೆಯ ಕೆಲಸ ಮಾಡುವವರಿಗೆ ಆದ್ಯತೆ ನೀಡಬೇಕು ’ ಎಂದು ಹೇಳಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/karnataka-news/basavaraj-bommai-flies-to-delhi-again-to-consult-bjp-leadership-on-cabinet-expansion-853918.html">ಮುಖ್ಯಮಂತ್ರಿ ಬೊಮ್ಮಾಯಿ ದಿಢೀರ್ ದೆಹಲಿಗೆ: ಗರಿಗೆದರಿದ ಕುತೂಹಲ | Prajavani</a></p>.<p>‘ಸಂಕಷ್ಟ ಒದಗಿದರೆ ಬೆಂಬಲಕ್ಕೆ ಇರರುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬೊಮ್ಮಾಯಿ ಅವರಿಗೆ ಭರವಸೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ದೇಶದ ಹಿತಕ್ಕೆ ಆದ್ಯತೆ ನೀಡುವ ರಾಜಕಾರಣವೇ ಮೊದಲಾಗಬೇಕು’ ಎಂದು ಉತ್ತರಿಸಿದರು.</p>.<p><strong>ಇದನ್ನೂ ಓದಿ:</strong> <a href="https://www.prajavani.net/karnataka-news/basavaraj-bommai-deve-gowda-karnataka-politics-bjp-jds-853904.html" target="_blank">ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡರ ಬಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷವು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿದೆ, ಆ ಹುದ್ದೆಯನ್ನು ನಿರ್ವಹಿಸುತ್ತಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.</p>.<p>ತಾಲ್ಲೂಕಿನ ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಚಿಕ್ಕಮಗಳೂರು ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಬೇಕು ಎಂಬುದು ಜನರ, ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದೇನೆ’ ಎಂದು ಉತ್ತರಿಸಿದರು.</p>.<p>‘ಜನರ ಹಿತದೃಷ್ಟಿ ಇಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಬೇಕು. ಬಸವರಾಜ ಬೊಮ್ಮಾಯಿ ಅವರು ಅನುಭವಿ ಇದ್ದಾರೆ. ಆಡಳಿತ ದೃಷ್ಟಿ ಇಟ್ಟುಕೊಂಡು ಮತ್ತು ರಾಜಕೀಯ ಸಮತೋಲನ ಇಟ್ಟುಕೊಂಡು ನಿರ್ವಹಿಸುತ್ತಾರೆ ಎಂಬ ನಂಬಿಕೆ ಇದೆ. ಜನಹಿತ ಮತ್ತು ಪಕ್ಷ ಬಲವರ್ಧನೆಯ ಕೆಲಸ ಮಾಡುವವರಿಗೆ ಆದ್ಯತೆ ನೀಡಬೇಕು ’ ಎಂದು ಹೇಳಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/karnataka-news/basavaraj-bommai-flies-to-delhi-again-to-consult-bjp-leadership-on-cabinet-expansion-853918.html">ಮುಖ್ಯಮಂತ್ರಿ ಬೊಮ್ಮಾಯಿ ದಿಢೀರ್ ದೆಹಲಿಗೆ: ಗರಿಗೆದರಿದ ಕುತೂಹಲ | Prajavani</a></p>.<p>‘ಸಂಕಷ್ಟ ಒದಗಿದರೆ ಬೆಂಬಲಕ್ಕೆ ಇರರುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬೊಮ್ಮಾಯಿ ಅವರಿಗೆ ಭರವಸೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ದೇಶದ ಹಿತಕ್ಕೆ ಆದ್ಯತೆ ನೀಡುವ ರಾಜಕಾರಣವೇ ಮೊದಲಾಗಬೇಕು’ ಎಂದು ಉತ್ತರಿಸಿದರು.</p>.<p><strong>ಇದನ್ನೂ ಓದಿ:</strong> <a href="https://www.prajavani.net/karnataka-news/basavaraj-bommai-deve-gowda-karnataka-politics-bjp-jds-853904.html" target="_blank">ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡರ ಬಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>